ವಯಸ್ಕರ ಬಿಸಿಜಿ ಲಸಿಕೆಯಿಂದ ಕ್ಷಯ ಸೋಂಕು ಪ್ರಮಾಣ ಕಡಿಮೆ: ಜಿಪಂ ಸಿಇಒ

KannadaprabhaNewsNetwork |  
Published : Aug 14, 2025, 01:00 AM IST
ಸಿಇಓ ವಯಸ್ಕರ ಬಿಸಿಜಿ ಲಸಿಕೆ ಪಡೆದರು  | Kannada Prabha

ಸಾರಾಂಶ

ಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ

ಕಾರವಾರ: ರೋಗ ನಿರೋಧಕ ಶಕ್ತಿ ಕುಂಠಿತಗೊಂಡಿರುವ ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವುದರಿಂದ ಸಮುದಾಯದಲ್ಲಿ ಕ್ಷಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಪಂ ಸಿಇಒ ಡಾ.ದಿಲೀಷ್ ಶಶಿ ತಿಳಿಸಿದರು.

ಅವರು ಬುಧವಾರ ಬೈತಕೋಲ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವತಃ ವಯಸ್ಕರ ಬಿಸಿಜಿ ಲಸಿಕೆ ಪಡೆದು ಮಾತನಾಡಿದರು.

ಕೇಂದ್ರ ಸರ್ಕಾರ ಕ್ಷಯರೋಗ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಕ್ಷಯರೋಗದ ವಿರುದ್ಧ ರಕ್ಷಣೆ ನೀಡಲು ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವ ಮಹತ್ವದ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ದೇಶದಲ್ಲಿ 274 ಜಿಲ್ಲೆಗಳಲ್ಲಿ, ಕರ್ನಾಟಕದ 16 ಜಿಲ್ಲೆಗಳಲ್ಲಿ ವಯಸ್ಕ ಬಿಸಿಜಿ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ 2ನೇ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಜಿ ಲಸಿಕಾಕರಣ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 22148 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಆರ್.ಸಿ.ಎಚ್. ಅಧಿಕಾರಿ

ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಗುಫಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ