ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್ ಸಲಹೆಕನ್ನಡಪ್ರಭ ವಾರ್ತೆ ತುಮಕೂರುಯುವ ಕಲಾವಿದರು ರಂಗಭೂಮಿಯನ್ನು ಪ್ರಯೋಗಾತ್ಮಕವಾಗಿ ಮುನ್ನಡೆಸುವ ಅಗತ್ಯವಿದೆ ಎಂದು ಹಿರಿಯ ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ.ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ರಂಗಭೂಮಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೋಯುವ ಗುರುತರ ಜವಾಬ್ದಾರಿ ಇಂದಿನ ಯುವ ಕಲಾವಿದರ ಮೇಲಿದೆ. ಇವರು ಮತ್ತಷ್ಟು ಪ್ರಾಯೋಗಿಕವಾಗಿ ತೊಡಗಿಕೊಂಡರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.ರಂಗಶ್ರೀ ಸಂಸ್ಥೆಯ ರಂಗಸ್ವಾಮಿ ಮಾತನಾಡಿ, ರಂಗಭೂಮಿಯಲ್ಲಿ ಹಿರಿಯ ಕಲಾವಿದರು ನೈಪಥ್ಯಕ್ಕೆ ಸರಿಯುತ್ತಿರುವ ಈ ಕಾಲದಲ್ಲಿ ಯುವಕಲಾವಿದರ ಇದನ್ನು ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗಬೇಕಾಗಿದೆ. ಅಂತಹ ಒಂದು ಪ್ರಯತ್ನವೇ ರಂಗಾರಂಭ. ನಾಟಕ ಕಲೆಯನ್ನು ಶಾಸ್ತ್ರೀಯವಾಗಿ ಅಭ್ಯಾಸ ಮಾಡಿ, ಅದರ ಎಲ್ಲ ಮಜಲುಗಳನ್ನು ಅರ್ಥ ಮಾಡಿಕೊಂಡು ಹೊಸ ರೀತಿಯ ನಾಟಕಗಳನ್ನು ಕಟ್ಟುವ ಮೂಲಕ ಪ್ರೇಕ್ಷಕರನ್ನು ಸೆಳೆಯುವ ಕೆಲಸಕ್ಕೆ ಮುಂದಾಗಿರುವುದು ಒಳ್ಳೆಯ ಬೆಳೆವಣಿಗೆ ಎಂದರು.
ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದರನ್ನು ಅಭಿನಂದಿಸಲಾಯಿತು. ಹಿರಿಯ ರಂಗಭೂಮಿ ಕಲಾವಿದರಾದ ವೈ.ಎನ್. ಶಿವಣ್ಣ,ಎಂ.ವಿ. ನಾಗಣ್ಣ, ಯೋಗಾನಂದ ಕುಮಾರ್,ಜಕ್ಕೇನಹಳ್ಳಿ ಎಸ್.ರಾಜಣ್ಣ, ಚಿದಾನಂದಮೂರ್ತಿ, ಹಿರಿಯ ಕಲಾವಿದರಾದ ಭಾಗ್ಯಮ್ಮ, ಆಶಾರಾಣಿ, ಹೆಚ್.ಎಸ್. ಪರಮೇಶ್, ಶ್ರೀನಿವಾಸಮೂರ್ತಿ ನೀನಾಸಂ ಮತ್ತಿತರರು ಉಪಸ್ಥಿತರಿದ್ದರು.