ಮಾದಕ ವಸ್ತು ಸೇವನೆಯಿಂದ ವ್ಯತಿರಿಕ್ತ ಪರಿಣಾಮ

KannadaprabhaNewsNetwork |  
Published : Jul 20, 2024, 12:48 AM IST
ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸುತ್ತಿದ್ದಾರೆ | Kannada Prabha

ಸಾರಾಂಶ

ಜನರು ಮಾದಕ ವಸ್ತುಗಳನ್ನು ಬಳಕೆ ಮಾಡಿ ತಾವೇ ಕಾಯಿಲೆಯನ್ನು ತಂದುಕೊಳ್ಳುತ್ತಿದ್ದಾರೆ

ನರಗುಂದ: ಮಾದಕ ವಸ್ತುಗಳ ಬಳಕೆ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜತೆಗೆ ನೆರೆಹೊರೆಯ ವಾತಾವರಣ ಕಲುಷಿತಗೊಳಿಸುತ್ತದೆ ಎಂದು ಪಿಎಸ್ಐ ಸವಿತಾ ಮುನ್ಯಾಳ ಹೇಳಿದರು.

ಶುಕ್ರವಾರ ಯಡಿಯೂರ ಸಿದ್ದಲಿಂಗೇಶ್ವರ ಪದವಿ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಶಿಕ್ಷಣ ಮಹಾವಿದ್ಯಾಲಯಗಳ ಎನ್ಎಸ್ಎಸ್ ಘಟಕಗಳು ಹಾಗೂ ನರಗುಂದ ಪೊಲೀಸ್ ಠಾಣೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಮತ್ತು ಸೇವನೆ ನಿಷೇಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾದಕ ವ್ಯಸನಿ ತನ್ನ ವೃತ್ತಿ ಗೌರವ, ಆಸ್ತಿ ಕಳೆದುಕೊಳ್ಳುತ್ತಾನೆ. ಮಾದಕ ವಸ್ತುಗಳ ಸೇವನೆಯ ಕಟು ಸತ್ಯ ಅರಿಯದೆ ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ವೃತ್ತಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಪೊಲೀಸ್ ಇಲಾಖೆಯು 112 ಸಹಾಯವಾಣಿ ಪರಿಚಯಿಸಿದೆ. ಇದರಲ್ಲಿ ಸಾರ್ವಜನಿಕರು ಮಾದಕ ವಸ್ತು ಮಾರಾಟಗಾರರು ಅಥವಾ ಕಾನೂನುಬಾಹಿರ ಚಟುವಟಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಗುರುತನ್ನು ಗುಪ್ತವಾಗಿ ಇಡಲಾಗುವುದು ಮತ್ತು ಸಂಪೂರ್ಣ ರಕ್ಷಣೆ ನೀಡಲಾಗುವುದು ಎಂದು ಹೇಳಿದರು.

ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಜಿ.ವಿ. ಕೊಣ್ಣೂರ ಮಾತನಾಡಿ, ಜನರು ಮಾದಕ ವಸ್ತುಗಳನ್ನು ಬಳಕೆ ಮಾಡಿ ತಾವೇ ಕಾಯಿಲೆಯನ್ನು ತಂದುಕೊಳ್ಳುತ್ತಿದ್ದಾರೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸರ್ವೆ ಪ್ರಕಾರ ಮದ್ಯ ವ್ಯಸನಕ್ಕೆ ಒಳಗಾಗಿ ವಾಹನ ಚಲಾಯಿಸಿದವರಲ್ಲಿ 30% ಅಪಘಾತಗಳು ನಡೆದಿದ್ದರೆ, ಶೇ. 40ರಷ್ಟು ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಮಾದಕ ವಸ್ತುಗಳನ್ನು ದೂರವಿಟ್ಟು ಚಟಕ್ಕೆ ಒಳಗಾಗಿರುವ ಜನರನ್ನು ಹೊರತರಲು ಸರ್ಕಾರ ರೂಪಿಸಿರುವ ಇಂಥ ಕಾರ್ಯಕ್ರಮಗಳು ಸಹಕಾರಿಯಾಗಿದ್ದು ಸಂಘ-ಸಂಸ್ಥೆಗಳು ಈ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.

ಪ್ರಾಚಾರ್ಯ ಆರ್.ಬಿ. ಪಾಟೀಲ ಮಾತನಾಡಿ, ನೈತಿಕ ಮೌಲ್ಯ ಮೈಗೂಡಿಸಿಕೊಳ್ಳುವುದು ಹಾಗೂ ಸಕಾರಾತ್ಮಕ ಮನೋಭಾವದಿಂದ ಶಾಂತಿಯುತ, ಆರೋಗ್ಯವಂತ ಜೀವನ ನಡೆಸುವ ಜತೆಗೆ ಮಾದಕ ವಸ್ತು ಹಾಗೂ ಅಕ್ರಮ ಚಟುವಟಿಕೆಯಿಂದ ಜನರು ದೂರವಿರಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಅಕ್ಕಮ್ಮ ವಗ್ಗರ, ಪ್ರೇಮ ಉಗಲಾಟ, ವೀಣಾ ಮುಂಡಾಸದ, ಗುಡದಪ್ಪ, ದಿನೇಶಗೌಡ ಪಾಟೀಲ, ಅಮಿತ ಗೌಡರ, ಲಕ್ಷ್ಮಿ ತೋರ್ಗಲ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪದವಿ ಮತ್ತು ಬಿಇಡಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ