ತೊಗರಿ, ಕಡಲೆ ಕಾಯಿಕೊರಕದ ಬಾಧೆ ನಿಯಂತ್ರಣಕ್ಕೆ ಸಲಹೆ

KannadaprabhaNewsNetwork |  
Published : Dec 10, 2025, 01:15 AM IST
ಮುಂಡರಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ಹಾಗೂ ಸಿಬ್ಬಂದಿ ಕಡಲೆ ಹೊಲವನ್ನು ವೀಕ್ಷಿಸಿದರು. | Kannada Prabha

ಸಾರಾಂಶ

ಕೀಟ ಹಾಗೂ ರೋಗ ಬಾಧೆಯ ಲಕ್ಷಣ ಕಂಡುಬಂದಲ್ಲಿ ಮಾತ್ರ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು.

ಮುಂಡರಗಿ: ತೊಗರಿ ಹಾಗೂ ಕಡಲೆಯಲ್ಲಿ ಕಾಯಿಕೊರಕದ(ಹೆಲಿಕೊವರ್ಪಾ) ಬಾದೆ ಕಂಡು ಬಂದಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.

ಇತ್ತೀಚೆಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತೊಗರಿ ನಿರ್ವಹಣೆಗಾಗಿ ಶೇ. 25- 50ರಷ್ಟು ಹೂವು ಬಿಡುವ ಸಮಯದಲ್ಲಿ ಮತ್ತು ಕಾಯಿ ಬಲಿಯುವ ಹಂತದಲ್ಲಿದ್ದಾಗ ಮೀಟರಿಗೆ 1 ಕೀಡೆ ಅಥವಾ 10 ಗಿಡಗಳಲ್ಲಿ 1 ಕೀಡೆ ಕಂಡುಬಂದಾಗ ಅಥವಾ ಪ್ರತಿ ಗಿಡದಲ್ಲಿ 2 ತತ್ತಿ ಅಥವಾ ಒಂದು ಕೀಡೆ ಕಾಣಿಸಿಕೊಂಡರೆ ಮೊದಲನೆ ಸಿಂಪರಣೆಯಾಗಿ ತತ್ತಿ ನಾಶಕಗಳಾದ 0.6 ಗ್ರಾಂ. ಥೈಯೊಡಿಕಾರ್ಬ 75 ಡಬ್ಲ್ಯುಪಿ ಅಥವಾ 2 ಮಿಲೀ ಪ್ರೊಪೆನೊಫಾಸ್ 50 ಇಸಿ ಅಥವಾ 0.6 ಗ್ರಾಂ ಮಿಥೋಮಿಲ್ 40 ಎಸ್‌ಪಿಯನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ಕಡಲೆಯಲ್ಲಿ ಕಾಯಿಕೊರಕದ ನಿಯಂತ್ರಣಕ್ಕಾಗಿ ಪ್ರತಿ ಲೀಟರ್‌ ನೀರಿನಲ್ಲಿ 2 ಗ್ರಾಂ ಇಮಾಮೆಕ್ಟಿನ್ ಬೆಂಝೋಯೇಟ್ ಬೆರೆಸಿ ಸಿಂಪಡಿಸಬೇಕು. 35ರಿಂದ 40 ದಿನದ ಬೆಳೆಯಲ್ಲಿ ಕುಡಿ ಚಿವುಟಬೇಕು. 20 ಪಿಪಿಎಂ ಎನ್‌ಎಎ ಸಿಂಪಡಿಸುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು.ಕಡಲೆಯಲ್ಲಿ ಕಾಯಿಕೊರಕದ ನಿರ್ವಹಣೆಗಾಗಿ ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಪ್ರತಿ ಎಕರೆಗೆ 10 ಸೇರು ಚುರಿಮುರಿಯನ್ನು(ಮಂಡಕ್ಕಿ) ಹೊಲದ ತುಂಬೆಲ್ಲಾ ಚೆಲ್ಲುವುದರಿಂದ ಪಕ್ಷಿಗಳಿಗೆ ಕೀಡೆಗಳನ್ನು ತಿನ್ನಲು ಪೋತ್ಸಾಹಿಸಿದಂತೆ ಆಗುತ್ತದೆ. ಈ ಕೀಡೆಯು ಸರಾಸರಿ ಶೇ. 40ರಿಂದ 50ರಷ್ಟು ಹಾನಿ ಮಾಡುತ್ತದೆ.

ಕೀಟನಾಶಕಗಳಾದ 2 ಮಿಲೀ ಕ್ಲೋರಫೆನಾಪೈರ್ 24 ಎಸ್‌ಸಿ ಅಥವಾ 0.075 ಮಿಲೀ ಫ್ಲೂಬೆಂಡಿಯಾಮೈಡ್ 39.35 ಎಸ್‌ಸಿ ಅಥವಾ ಕ್ಲೋರೆಂಟ್ರಿನಾ ಲಿಪ್ರೋಲ್ 18.5 ಎಸ್‌ಸಿ 0.15 ಮಿಲೀ ಅಥವಾ 0.2 ಗ್ರಾಂ ಇಮಾಮೆಕ್ಟಿನ್ ಬೆಂಜೊಯೇಟ್ 5 ಎಸ್‌ಜಿ ಅಥವಾ 0.1 ಮಿಲೀ ಸ್ಪೈನೊಸ್ಯಾಡ್ 45 ಎಸ್‌ಸಿ ಅಥವಾ 0.3 ಮಿಲೀ ಇಂಡಾಕ್ಸಾಕಾರ್ಬ್ 14.5 ಎಸ್‌ಸಿ ಅಥವಾ 4 ಗ್ರಾಂ ಕಾರ್ಬರಿಲ್ 50 ಡಬ್ಲ್ಯುಪಿ ಅಥವಾ 1.0 ಮಿಲೀ ಮಿಥೈಲ್ ಪ್ಯಾರಾಥಿಯಾನ್ 50 ಇಸಿ ಅಥವಾ 2 ಮಿಲೀ ಕ್ವಿನಾಲ್‌ಫಾಸ್ 25 ಇಸಿ ಅಥವಾ 2 ಮಿಲೀ ಮಿಥೊಮಿಲ್ 40 ಎಸ್‌ಪಿ ಅಥವಾ 2 ಮಿಲೀ ಪ್ರೊಫೆನೋಫಾಸ್ 50 ಇಸಿ ಅಥವಾ 1 ಗ್ರಾಂ ಅಸಿಫೇಟ್ 75 ಎಸ್‌ಪಿ ಅಥವಾ ಬೆಳ್ಳುಳ್ಳಿ ಮತ್ತು ಹಸಿಮೆಣಸಿನಕಾಯಿ ಕಷಾಯವನ್ನು 20 ಮಿಲೀ ಅಥವಾ ಹೆಲಿಕೋವರ್ಪಾ ಎನ್‌ಪಿವಿ(ಎನ್‌ಬಿಎಐಆರ್) 2.0 ಮಿಲೀ. ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ಕೀಟ ಹಾಗೂ ರೋಗ ಬಾಧೆಯ ಲಕ್ಷಣ ಕಂಡುಬಂದಲ್ಲಿ ಮಾತ್ರ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವ ಪ್ರದೇಶಗಳಲ್ಲಿ ಕೀಟ ಮತ್ತು ರೋಗದ ಬಾಧೆ ಪ್ರತಿವರ್ಷವೂ ತಪ್ಪದೇ ಬರುತ್ತದೆಯೋ ಅಂತಹ ಸಂದರ್ಭದಲ್ಲಿ ಕೀಟ ಹಾಗೂ ರೋಗಗಳು ಬರುವುದಕ್ಕೆ ಮೊದಲೇ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ