ಬಕ್ರೀದ್ ಸ್ಮರಣೆಗಾಗಿ ತ್ಯಾಗ, ಧರ್ಮದ ಮನೋಭಾವನೆ ರೂಢಿಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿದ್ದು ಸಮಾಜದಲ್ಲಿ ಎಲ್ಲರೊಂದಿಗೆ ಪ್ರೀತಿ, ಸೌಹಾರ್ದತೆಯಿಂದ ಸಹಬಾಳ್ವೆ ನಡೆಸಿ ಸಮಾಜದಲ್ಲಿ ಸೌಹಾರ್ದತೆ ವಾತಾವರಣ ನಿರ್ಮಿಸಬೇಕು.
ಡಂಬಳ: ಈದ್ಗಾ ಮೈದಾನದಲ್ಲಿ ತ್ಯಾಗ- ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಶ್ರದ್ಧಾ- ಭಕ್ತಿಯಿಂದ ಗುರುವಾರ ಆಚರಿಸಿದರು.
ಬೆಳಗ್ಗೆ ವಿವಿಧ ಬಡಾವಣೆಯ ಪ್ರದೇಶಗಳಿಂದ ಈದ್ಗಾ ಮೈದಾನಕ್ಕೆ ಆಗಮಿಸಿದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಧರ್ಮಗುರುಗಳಾದ ಖಾದರಸಾಬ ಮುಲ್ಲಾ ಧರ್ಮಗ್ರಂಥ ಪಠಿಸಿದರು. ಬಳಿಕ ಧರ್ಮ ಸಂದೇಶ ನೀಡಿದ ಅವರು, ಬಕ್ರೀದ್ ಸ್ಮರಣೆಗಾಗಿ ತ್ಯಾಗ, ಧರ್ಮದ ಮನೋಭಾವನೆ ರೂಢಿಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿದ್ದು ಸಮಾಜದಲ್ಲಿ ಎಲ್ಲರೊಂದಿಗೆ ಪ್ರೀತಿ, ಸೌಹಾರ್ದತೆಯಿಂದ ಸಹಬಾಳ್ವೆ ನಡೆಸಿ ಸಮಾಜದಲ್ಲಿ ಸೌಹಾರ್ದತೆ ವಾತಾವರಣ ನಿರ್ಮಿಸಬೇಕು ಎಂದರು. ವಿಶೇಷ ಪ್ರಾರ್ಥನೆ ಸಲ್ಲಿಸಿ ದೇಶದ ಮತ್ತು ರಾಜ್ಯದ ರೈತರಿಗೆ ಉತ್ತಮ ಮಳೆ ಬೆಳೆಯಾಗಿ ಉತ್ತಮ ಫಸಲು ಬರಲಿ, ಯುವಕರಲ್ಲಿ ಆತ್ಮಸ್ಥೈರ್ಯ, ಕಾರ್ಮಿಕರಿಗೆ ಉತ್ತಮ ಆರೋಗ್ಯವನ್ನು ದಯಾಪರನಾದ ಅಲ್ಲಾ ಕರುಣಿಸಲಿ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.