ಕೃಷಿ ಚಟುವಟಿಕೆಯಲ್ಲಿ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ

KannadaprabhaNewsNetwork |  
Published : Jun 11, 2026, 02:45 AM IST
ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ರೈತರು(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮ್ಯಾಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ. ಮಾರುಕಟ್ಟೆಯಲ್ಲಿ ದೊರೆಯುವ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ ಗೊಬ್ಬರಗಳನ್ನು ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹೆಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿಎಪಿ ಬಳಸಿದರೆ ₹1,630 ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ.

ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆಜಿ ಎಂಒಪಿ ಬೇಕಾಗುತ್ತದೆ. 33 ಕೆಜಿ ಎಂಒಪಿಗೆ ₹1,132 ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ ₹2,761 ವೆಚ್ಚವಾಗುತ್ತದೆ. ಇತರೆ ಸಂಯುಕ್ತ ರಸಗೊಬ್ಬರಗಳನ್ನು ಬಳಸಿದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ. ಪ್ರತಿ ಹೆಕ್ಟೇರಿಗೆ ₹2,500ಕ್ಕಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

8ಕೆಡಿಬಿಪಿ2-

ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ರೈತರು(ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನನ್ನ ಕಂಡರೆ ವಿರೋಧ ಪಕ್ಷಕ್ಕೆ ಅಸೂಯೆ: ಡಿಕೆಶಿ ಆರೋಪ
ಸುಧೀರ್ಘ ಪ್ರಧಾನಿ ದಾಖಲೆ: ಬಿಜೆಪಿ ಸಂಭ್ರಮ