ಕನ್ನಡಪ್ರಭವಾರ್ತೆ ಔರಾದ್
ಸಂತಪೂರನಲ್ಲಿ 5.68 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರು ಸರಿಯಾಗಿ ಕೆಲಸ ಮಾಡಬೇಕು. ಆಸ್ಪತ್ರೆಗೆ ಬರುವ ರೋಗಿಗಳ ಜೊತೆ ಸರಿಯಾಗಿ ವ್ಯವಹರಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿಗೆ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಗೆ ಕಳುಹಿಸದೇ ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಆಸ್ಪತ್ರೆ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ವೈದ್ಯರು ಮತ್ತು ಸಿಬ್ಬಂದಿ ದೂರುಗಳಿಗೆ ಆಸ್ಪದವಿಲ್ಲದಂತೆ ಕೆಲಸ ಮಾಡಬೇಕೆಂದು ಸೂಚಿಸಿದರು.
ಹಲವು ಕಾಮಗಾರಿಗಳಿಗೆ ಚಾಲನೆ:ಸುಮಾರು 25 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆಯನ್ನು ಶಾಸಕರು ಇದೇ ಸಂದರ್ಭದಲ್ಲಿ ನೆರವೇರಿಸಿದರು. ಖೇರ್ಡಾ(ಬಿ), ಭಂಡಾರಕುಮಟಾ, ಖೇರ್ಡಾ ತಾಂಡಾ, ಅಂಬರ ನಾಯಕ್ ತಾಂಡಾ, ಹುಲ್ಯಾಳ, ಡೊಂಗರಗಾಂವ, ವಸಿರಾಮ ನಾಯಕ್ ತಾಂಡಾ, ಸೇವಾ ನಾಯಕ್ ತಾಂಡಾ, ಹಸ್ಸಿಖೇರಾ, ಹಸ್ಸಿಖೇರಾ ತಾಂಡಾ, ಗೌಂಡಗಾಂವ ತಾಂಡಾ, ಫುಲಸಿಂಗ್ ತಾಂಡಾ, ಬೆಳಕೋಣಿ(ಸಿಹೆಚ್), ಹೆಡಗಾಪೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಶಾಲೆಗಳಲ್ಲಿ ಸೋಲಾರ್ ಪ್ಯಾನಲ್ ಅಳವಡಿಕೆ, ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ, ರಸ್ತೆ, ಅಂಗನವಾಡಿ ಕಟ್ಟಡ, ಸಿಸಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಭೂಮಿ ಪೂಜೆ ಮತ್ತು ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.
ಗ್ರಾಮ ಸಂಚಾರದ ವೇಳೆ ಶಾಸಕರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಗ್ರಾಮಸ್ಥರು ತಮ್ಮ ಗ್ರಾಮದಲ್ಲಿರುವ ಸಮಸ್ಯೆಗಳು ಹಾಗೂ ಮುಂದಿನ ದಿನಗಳಲ್ಲಿ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ನಾಗನಾಥ ಚಿಕ್ಲೆ, ಶಿವರಾಜ ಅಲ್ಮಾಜೆ, ಸಚಿನ ರಾಠೋಡ್, ರಾಮ್ ಪಾಟೀಲ, ಪ್ರವೀಣ ಕಾರಬಾರಿ, ಅಮೃತರಾವ ವಟಗೆ, ಸುಜಿತ್ ರಾಠೋಡ್, ಗಜಾನಂದ ವಟಗ, ರಾಜಪ್ಪ ಸೋರಾಳೆ, ಸಚಿನ್ ಬಿರಾದಾರ, ಕೇರಬಾ ಪವಾರ್ ಹಾಗೂ ಇತರರು ಉಪಸ್ಥಿತರಿದ್ದರು.