ಕನ್ನಡಪ್ರಭ ವಾರ್ತೆ ಕಲಬುರಗಿ
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ರೈತರಿಗೆ ಅನುಕೂಲವಾಗಲು ಭೀಮಾ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೂ ನಿರ್ಮಾಣಗೊಂಡ ಕಾಲುವೆಗಳಿಗೆ ನೀರು ಹರಿಸದೇ ಇರುವುದರಿಂದ ಕಾಲುವೆಗಳಲ್ಲಿ ಗಿಡಗಂಟಿ ಬೆಳೆದಿದ್ದು, ಅದನ್ನು ಸ್ವಚ್ಛಗೊಳಿಸುವಂತೆ ಮಾಡಿದ ಹೋರಾಟಗಳಿಗೂ ಸಹ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವರ್ಷ ಮಳೆ ಇಲ್ಲದೇ ಇರುವುದರಿಂದ ಭೀಮಾ ನದಿಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗುತ್ತಿದೆ. ಆದ್ದರಿಂದ ಕೆಬಿಜೆಎನ್ಎಲ್ ನಂಬರ್ 55,74, 118 ಎಸ್ಕೆಪಿಯಿಂದ ಭೀಮಾ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಇಳುವರಿ ತೋರಿಸುವಲ್ಲಿ ಹಾಗೂ ತೂಕದಲ್ಲಿ ಮೋಸ ಮಾಡುತ್ತಿದ್ದು, ಅದನ್ನು ತಪ್ಪಿಸುವಂತೆ ಆಗ್ರಹಿಸಿದರು.ಕಳೆದ 2022-2023ನೇ ಸಾಲಿನಲ್ಲಿ ರೈತರಿಗೆ ಬರಬೇಕಾದ ಬಾಕಿ ಹಣ ಪಾವತಿಲು ನಿರ್ದೇಶನ ನೀಡುವಂತೆ, ಭೀಮಾ ನದಿಗೆ ನಿರ್ಮಿಸಲಾದ ಬ್ಯಾರೇಜ್ಗಳಲ್ಲಿ ನೀರು ಹರಿದು ಹೋಗುತ್ತಿರುವುದನ್ನು ತಪ್ಪಿಸಲು ಎಲ್ಲ ಬ್ಯಾರೇಜ್ಗಳಿಗೆ ಗೇಟ್ ಹಾಕಿ ನೀರು ಸಂಗ್ರಹ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶ್ರೀಮಂತ್ ಬಿರಾದಾರ್, ಸಿದ್ದು ಸಣ್ಣೂರ್, ಗುರು ಚಾಂದಕವಟೆ, ಅರ್ಜುನ್ ಕುಂಬಾರ್, ಅಶೋಕ್ ಹೂಗಾರ್ ಪಾಲ್ಗೊಂಡಿದ್ದರು.