ಸಿದ್ದು ನಂತರ ಸಿಎಂ ರೇಸಲ್ಲಿರೋದು ಡಿಕೆಶಿ ಮಾತ್ರ: ಬಾಲಕೃಷ್ಣ

KannadaprabhaNewsNetwork |  
Published : Apr 28, 2026, 01:15 AM IST
27ಕೆಆರ್ ಎಂಎನ್ 6.ಜೆಪಿಜಿಶಾಸಕ ಬಾಲಕೃಷ್ಣ | Kannada Prabha

ಸಾರಾಂಶ

ರಾಮನಗರ: ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ರೇಸ್‌ನಲ್ಲಿರೋದು ಡಿ.ಕೆ.ಶಿವಕುಮಾರ್ ಮಾತ್ರ‌. ಬೇರೆಯವರೂ ರೇಸ್‌ನಲ್ಲಿ ಇರಬಹುದು. ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನ ಡಿ.ಕೆ.ಶಿವಕುಮಾರ್ ಅವರಿಗೆ ಸಿಗಲಿದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು

ರಾಮನಗರ: ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ರೇಸ್‌ನಲ್ಲಿರೋದು ಡಿ.ಕೆ.ಶಿವಕುಮಾರ್ ಮಾತ್ರ‌. ಬೇರೆಯವರೂ ರೇಸ್‌ನಲ್ಲಿ ಇರಬಹುದು. ಆದರೆ ಅದು ಕಾಲಕ್ಕೆ ತಕ್ಕಂತೆ ತೀರ್ಮಾನ ಆಗುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯನವರು ಬೇಡ ಅಂದಾಗ ಆ ಸ್ಥಾನ ಡಿ.ಕೆ.ಶಿವಕುಮಾರ್ ಅವರಿಗೆ ಸಿಗಲಿದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅವಧಿಯಲ್ಲಿಯೇ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ. ನಮ್ಮ ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಡಿ.ಸುಧಾಕರ್ ಅನಾರೋಗ್ಯ ವಿಚಾರ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ನಾಯಕರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಬಾಲಿಷವಾದ ಹೇಳಿಕೆ. ಯಾವ ಆಧಾರದಲ್ಲಿ ಇದನ್ನು ಹೇಳಿದ್ದಾರೆ ಅಂತ ಗೊತ್ತಿಲ್ಲ. ಹೆಬ್ಬೆಟ್ಟು ಹಾಕಿಸಿಕೊಳ್ಳಲು ಯಾರು ಹೋಗಿದ್ದಾರೆ ಅಂತ ಅವರೇ ಹೇಳಲಿ ಎಂದರು.

ಡಿ.ಕೆ.ಶಿವಕುಮಾರ್ ಗು ಸುಧಾಕರ್‌ ಗೂ ಹಳೇ ವಿಶ್ವಾಸ. ಅಂದಿನಿಂದ ಇಂದಿನವರೆಗೂ ಅವರ ಕುಟುಂಬದ ಜೊತೆ ಡಿ.ಕೆ.ಶಿವಕುಮಾರ್ ನಿಂತಿದ್ದಾರೆ. ಅವರ ಆರೋಗ್ಯದ ವಿಚಾರ ನೋಡಿಕೊಳ್ಳಲು ಕುಣಿಗಲ್ ಶಾಸಕ ರಂಗನಾಥ್‌ ಅವರಿಗೆ ತಿಳಿಸಿದ್ದಾರೆ. ಅವರ ಆರೋಗ್ಯದ ಕಡೆ ಮೊದಲು ಗಮನ ಹರಿಸೋಣ. ಅದನ್ನು ಬಿಟ್ಟು ಇಂತಹ ಹೇಳಿಕೆಗಳನ್ನು ಕೊಟ್ಟು ಕುಮಾರಸ್ವಾಮಿ ಸಣ್ಣವರಾಗುವುದು ಬೇಡ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಸಂಪುಟ ಪುನರಚನೆ ಬಗ್ಗೆ ಮಾತನಾಡಿದ ಬಾಲಕೃಷ್ಣ, ಈ ಬಗ್ಗೆ ನಾವು ಮನವಿ ಮಾಡಿದ್ದೀವಿ. ಹೈಕಮಾಂಡ್ ಶೀಘ್ರದಲ್ಲಿ ತೀರ್ಮಾನ ತಗೆದುಕೊಳ್ಳಲಿದೆ. ಹೈಕಮಾಂಡ್ ಯಾಕೆ ವಿಳಂಬ ಮಾಡುತ್ತಿದಿಯೊ ಗೊತ್ತಿಲ್ಲ. ನಾಳೆಯೇ ಸಂಪುಟ ವಿಸ್ತಾರಣೆ ಮಾಡಿದರೂ ನಮಗೆ ಖುಷಿ ಎಂದರು.

ನಮ್ಮ ಹೈಕಮಾಂಡ್ ವೀಕ್ ಇಲ್ಲ, ಸ್ಟ್ರಾಂಗ್ ಇದೆ. ಸಂಪುಟ ರಚನೆ ಬಗ್ಗೆ ಸಾಧಕ ಬಾಧಕಗಳ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಹಾಗಾಗಿ, ವಿಳಂಬ ಆಗುತ್ತಿದೆ ಎಂದು ಬಾಲಕೃಷ್ಣ ತಿಳಿಸಿದರು.

27ಕೆಆರ್ ಎಂಎನ್ 6.ಜೆಪಿಜಿ

ಶಾಸಕ ಬಾಲಕೃಷ್ಣ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಗಾರಿಕೆಗೆ ಭೂಮಿ: ಅಧಿಕಾರಿಗಳಿಂದ ಸುಳ್ಳು ವರದಿ
ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕಶಾಸ್ತಿ