ಕೃಷಿ ಸಹಕಾರ ಸಂಘಗಳು ಕೃಷಿಕರ ಸೇವೆಗೆ ಬದ್ಧರಾಗಿರಬೇಕು: ಪ್ರಸಾದ್ ಶೆಟ್ಟಿ

KannadaprabhaNewsNetwork |  
Published : Jul 10, 2026, 01:15 AM IST
09ಕೃಷಿ | Kannada Prabha

ಸಾರಾಂಶ

ಕೃಷಿ ಪತ್ತಿನ ಸಹಕಾರ ಸಂಘಗಳು ಪರಿಸರದ ಕೃಷಿಕರ ಸೇವೆಗೆ ಸದಾ ಬದ್ಧರಾಗಿರಬೇಕು ಎಂದು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಹೇಳಿದರು.

ಕಾಪು: ಕೃಷಿ ಪತ್ತಿನ ಸಹಕಾರ ಸಂಘಗಳು ಪರಿಸರದ ಕೃಷಿಕರ ಸೇವೆಗೆ ಸದಾ ಬದ್ಧರಾಗಿರಬೇಕು ಎಂದು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಹೇಳಿದರು.

ಬುಧವಾರ ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಶಿರ್ವ ಕಾರ್ಯವ್ಯಾಪ್ತಿಯ ರೈತರ ಪಹಣಿಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವ ಎರಡು ದಿನಗಳ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲೂಕು ಕೃಷಿ ಅಧಿಕಾರಿ ಪುಷ್ಪಲತಾ ಅವರು ನೋಂದಣಿ ಬಗ್ಗೆ ಸಕಾಲಿಕ ಮಾಹಿತಿ ನೀಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್ ಕೋಡುಗುಡ್ಡೆ, ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿನಿಧಿ ರಾಜಗೋಪಾಲ್ ಬಲ್ಲಾಳ್, ನಿರ್ದೇಶಕರಾದ ರಂಜಿತ್ ಪ್ರಭು ಬೆಳಂಜಾಲೆ ಮತ್ತು ಪಾರಿಜಾತ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ, ತಾಲೂಕು ಕೃಷಿ ಅಧಿಕಾರಿ ಪುಷ್ಪಲತಾ, ತಾಂತ್ರಿಕ ವ್ಯವಸ್ಥಾಪಕಿ ದಿವ್ಯಾ, ಕೃಷಿ ಸಖಿಯರಾದ ಪ್ರಜ್ಞಾ, ಭಾರತಿ ಆಚಾರ್ಯ, ಪ್ರಗತಿಪರ ಕೃಷಿಕರಾದ ನಿತ್ಯಾನಂದ ನಾಯಕ್ ಪಾಲಮೆ, ಕಾರ್ಯವ್ಯಾಪ್ತಿಯ ಕೃಷಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓದುವ ಹವ್ಯಾಸದಿಂದ ಸಾಹಿತ್ಯ ಬೆಳವಣಿಗೆ: ಡಾ. ಹರಿಕೃಷ್ಣ ಪುನರೂರು
ಕೌಶಲ್ಯದಿಂದ ಬದುಕು ಸಾಧ್ಯ : ಡಿಸಿಎಫ್‌ ಶಿವರಾಮ್ ಬಾಬು