ಪತ್ತನಾಜೆಯಲ್ಲಿ ಕೃಷಿ ಸಂಸ್ಕೃತಿ ಅಂತರ್ಗತ: ವಿಜೇತ್ ಶೆಟ್ಟಿ

KannadaprabhaNewsNetwork |  
Published : May 27, 2026, 03:00 AM IST
ಪತ್ತನಾಜೆ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಪತ್ತನಾಜೆ ಆಚರಣೆಯ ಹಿಂದೆ ಈ ನೆಲದ ನಂಬಿಕೆ ಮತ್ತು ಕೃಷಿ ಸಂಸ್ಕೃತಿ ಅಂತರ್ಗತವಾಗಿದೆ. ಸಾಂಪ್ರದಾಯಿಕ ಜಾತ್ರೆ, ಉತ್ಸವ, ದೈವಾರಾಧನೆ, ಯಕ್ಷಗಾನ ಮೇಳಗಳ ತಿರುಗಾಟಕ್ಕೆ ತೆರೆ ಎಳೆಯುವ ಕೃಷಿ ವರ್ಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಗಡುವಿನಂತೆ ಪತ್ತನಾಜೆಯನ್ನು ಆಚರಿಸುತ್ತಾರೆ. ಇದೊಂದು ಕಾಲ ನಿರ್ಣಯದ ಮಹತ್ವವನ್ನು ಪಡೆದಿದೆ ಎಂದು ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ ಹೇಳಿದರು.

ಮಂಗಳೂರು: ಪತ್ತನಾಜೆ ಆಚರಣೆಯ ಹಿಂದೆ ಈ ನೆಲದ ನಂಬಿಕೆ ಮತ್ತು ಕೃಷಿ ಸಂಸ್ಕೃತಿ ಅಂತರ್ಗತವಾಗಿದೆ. ಸಾಂಪ್ರದಾಯಿಕ ಜಾತ್ರೆ, ಉತ್ಸವ, ದೈವಾರಾಧನೆ, ಯಕ್ಷಗಾನ ಮೇಳಗಳ ತಿರುಗಾಟಕ್ಕೆ ತೆರೆ ಎಳೆಯುವ ಕೃಷಿ ವರ್ಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಗಡುವಿನಂತೆ ಪತ್ತನಾಜೆಯನ್ನು ಆಚರಿಸುತ್ತಾರೆ. ಇದೊಂದು ಕಾಲ ನಿರ್ಣಯದ ಮಹತ್ವವನ್ನು ಪಡೆದಿದೆ ಎಂದು ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ತಾಲೂಕು ಸಮಿತಿ ಹಾಗೂ ಥಿಯಾಸೋಫಿಕಲ್ ಸೊಸೈಟಿ ಮಂಗಳೂರು ಸಹಯೋಗದಲ್ಲಿ ನಗರದ ಥಿಯಾಸೋಫಿಕಲ್ ಸೊಸೈಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪತ್ತನಾಜೆ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಮಾತನಾಡಿ, ಚೆನ್ನಾಗಿ ಫಸಲು ಬರಲು ನೈಸರ್ಗಿಕ ಕ್ರಮವನ್ನು ಅಳವಡಿಸುವ ಮಹತ್ವದ ವಿಚಾರ ಪತ್ತನಾಜೆ ಆಚರಣೆಯ ಹಿಂದೆ ಇದೆ ಎಂದರು.ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಅಭಾಸಾಪ ಮಂಗಳೂರು ವಿಭಾಗ ಸಂಯೋಜಕ ಸುಂದರ ಶೆಟ್ಟಿ, ವಿದ್ವಾಂಸ ಡಾ.ಪ್ರಭಾಕರ ಜೋಷಿ ಇದ್ದರು.

ಅಭಾಸಾಪ ಕಾರ್ಯದರ್ಶಿ ಪ್ರೊ.ಶೈಲಜಾ ಪುದುಕೋಳಿ ಸ್ವಾಗತಿಸಿ, ಯಶೋದಾ ಕುಮಾರಿ ವಂದಿಸಿದರು. ಉಷಾ ಕುಮಾರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗುವುದಿಲ್ಲ
ಪ್ರಯತ್ನವಿಲ್ಲದೇ ಯಾವುದೇ ಸಾಧನೆ ಅಸಾಧ್ಯ: ಡಾ. ಕಲ್ಲನಗೌಡರ