ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಸೋಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೃತಕ ಬುದ್ಧಿಮತ್ತೆಯಿಂದ ದಿನೇ ದಿನೇ ಉದ್ಯೋಗ ಕಡಿತಗೊಳ್ಳುತ್ತಿದೆ. ಉದ್ಯೋಗಸ್ಥರೂ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೃಷಿಯ ಮೇಲಿನ ಅವಲಂಬನೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದರು.
ನೂತನ ತಂತ್ರಜ್ಞಾನ ಬಳಸಿಕೊಂಡು ಯುವಕರು ಸಮಗ್ರ ಕೃಷಿ ಮಾಡಿದರೆ ತಿಂಗಳಿಗೆ 2 ರಿಂದ 3 ಲಕ್ಷ ರು. ಸಂಪಾದಿಸಬಹುದು. ಯಾರ ಗುಲಾಮರಾಗಿ ಉದ್ಯೋಗ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ. ಅದಕ್ಕೆ ಕೃಷಿ ವಿವಿ ನೆರವಾಗಲಿದೆ ಎಂದರು.ಗ್ಯಾಸ್ ಸಮಸ್ಯೆಗೆ ಪ್ರಧಾನಿ ಮೋದಿ ಅವರನ್ನು ಹೊಣೆ ಮಾಡಲಾಗುವುದಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ಯಾರ ಮಾತು ಕೇಳಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಮೋದಿ ವಿಶ್ವಗುರು, ಪ್ರಪಂಚದ ಎಲ್ಲರ ಸ್ನೇಹ ಗೆದ್ದಿದ್ದೇನೆ ಎನ್ನುವವರು ಇಂತಹ ಸಂದರ್ಭಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ ಅಷ್ಟೇ ಎಂದು ಮೊನಚು ಮಾತಿನಿಂದ ತಿವಿದರು.
ಹೊಸದಾಗಿ ಆಯ್ಕೆಯಾದ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ. ಸಚಿವ ಸ್ಥಾನಕ್ಕೆ ಹೊಸಬರು, ಹಳಬರು ಎಂಬ ಬೇಧವಿಲ್ಲ. ಜಿವಾರು, ಕಮ್ಯೂನಿಟಿ ಎಲ್ಲವನ್ನು ನೋಡಿ ಸಚಿವ ಸ್ಥಾನ ನೀಡಬೇಕು. ನಮ್ಮ ಪಕ್ಷ ಮುಕ್ತವಾಗಿದೆ. ಸಿಎಂ, ಡಿಸಿಎಂ ಇಬ್ಬರು ಸೇರಿ ನಿರ್ಧಾರ ಮಾಡುತ್ತೆ. ಹಳಬರಿಗೆ ಕೋಕ್ ಕೊಡುವ ಬಗ್ಗೆ ಕೂಡ ಪಕ್ಷ ನಿರ್ಧರಿಸುತ್ತೆ ಎಂದು ಹೇಳಿದರು.