ಕೃಷಿ ವಿವಿ ಲಕ್ಷ ಕೋಟಿ ಅನುದಾನಕ್ಕೆ ಸಮ: ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Mar 13, 2026, 01:45 AM IST
12ಕೆಎಂಎನ್ ಡಿ12 | Kannada Prabha

ಸಾರಾಂಶ

ಗ್ಯಾಸ್ ಸಮಸ್ಯೆಗೆ ಪ್ರಧಾನಿ ಮೋದಿ ಅವರನ್ನು ಹೊಣೆ ಮಾಡಲಾಗುವುದಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ಯಾರ ಮಾತು ಕೇಳಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಮೋದಿ ವಿಶ್ವಗುರು, ಪ್ರಪಂಚದ ಎಲ್ಲರ ಸ್ನೇಹ ಗೆದ್ದಿದ್ದೇನೆ ಎನ್ನುವವರು ಇಂತಹ ಸಂದರ್ಭಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ ಅಷ್ಟೇ.

ಕನ್ನಡಪ್ರಭ ವಾರ್ತೆ ಮದ್ದೂರು

ಇನ್ನು ನೂರು ವರ್ಷವಾಗಿದ್ದರೂ ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ತರಲಾಗುತ್ತಿರಲಿಲ್ಲ. ಕೃಷಿ ವಿಶ್ವವಿದ್ಯಾಲಯ ತಂದು ಜಿಲ್ಲೆಗೆ ಶಾಶ್ವತ ಕೊಡುಗೆ ನೀಡಿದ್ದೇವೆ. ಇನ್ನು ಲಕ್ಷ ಕೋಟಿ ಅನುದಾನ ತಂದರೂ ಕೃಷಿ ವಿಶ್ವವಿದ್ಯಾನಿಲಯಕ್ಕೆ ಸಮನಾಗುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಸೋಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೃತಕ ಬುದ್ಧಿಮತ್ತೆಯಿಂದ ದಿನೇ ದಿನೇ ಉದ್ಯೋಗ ಕಡಿತಗೊಳ್ಳುತ್ತಿದೆ. ಉದ್ಯೋಗಸ್ಥರೂ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೃಷಿಯ ಮೇಲಿನ ಅವಲಂಬನೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದರು.

ನೂತನ ತಂತ್ರಜ್ಞಾನ ಬಳಸಿಕೊಂಡು ಯುವಕರು ಸಮಗ್ರ ಕೃಷಿ ಮಾಡಿದರೆ ತಿಂಗಳಿಗೆ 2 ರಿಂದ 3 ಲಕ್ಷ ರು. ಸಂಪಾದಿಸಬಹುದು. ಯಾರ ಗುಲಾಮರಾಗಿ ಉದ್ಯೋಗ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ. ಅದಕ್ಕೆ ಕೃಷಿ ವಿವಿ ನೆರವಾಗಲಿದೆ ಎಂದರು.

ಗ್ಯಾಸ್ ಸಮಸ್ಯೆಗೆ ಪ್ರಧಾನಿ ಮೋದಿ ಅವರನ್ನು ಹೊಣೆ ಮಾಡಲಾಗುವುದಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ಯಾರ ಮಾತು ಕೇಳಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಮೋದಿ ವಿಶ್ವಗುರು, ಪ್ರಪಂಚದ ಎಲ್ಲರ ಸ್ನೇಹ ಗೆದ್ದಿದ್ದೇನೆ ಎನ್ನುವವರು ಇಂತಹ ಸಂದರ್ಭಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ ಅಷ್ಟೇ ಎಂದು ಮೊನಚು ಮಾತಿನಿಂದ ತಿವಿದರು.

ವಾಣಿಜ್ಯ ಸಿಲಿಂಡರ್‌ಗೆ ಈಗಾಗಲೇ ಸಮಸ್ಯೆಯಾಗಿದೆ. ಮುಂದಿನ 15 ದಿನದಲ್ಲಿ ಗೃಹಬಳಕೆ ಅಡುಗೆ ಅನಿಲಕ್ಕೂ ಸಮಸ್ಯೆ ಆಗಲಿದೆ. ಗ್ಯಾಸ್‌ಗೆ ಎದುರಾಗಿರುವ ಅಭಾವವನ್ನು ಕೇಂದ್ರ ಸರ್ಕಾರವೇ ಸಮಸ್ಯೆ ನೀಗಿಸಬೇಕು ಎಂದರು.

ಹೊಸದಾಗಿ ಆಯ್ಕೆಯಾದ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ. ಸಚಿವ ಸ್ಥಾನಕ್ಕೆ ಹೊಸಬರು, ಹಳಬರು ಎಂಬ ಬೇಧವಿಲ್ಲ. ಜಿವಾರು, ಕಮ್ಯೂನಿಟಿ ಎಲ್ಲವನ್ನು ನೋಡಿ ಸಚಿವ ಸ್ಥಾನ ನೀಡಬೇಕು. ನಮ್ಮ ಪಕ್ಷ ಮುಕ್ತವಾಗಿದೆ. ಸಿಎಂ, ಡಿಸಿಎಂ ಇಬ್ಬರು ಸೇರಿ ನಿರ್ಧಾರ ಮಾಡುತ್ತೆ. ಹಳಬರಿಗೆ ಕೋಕ್ ಕೊಡುವ ಬಗ್ಗೆ ಕೂಡ ಪಕ್ಷ ನಿರ್ಧರಿಸುತ್ತೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರಾಶ್ರಿತರಿಗೆ ವಾತ್ಸಲ್ಯ ತುಂಬುವ ಕೆಲಸವಾಗಬೇಕು: ಮಲ್ಲಿಕಾರ್ಜುನ್
ಹಾವಿನಮಾರನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಪ್ರತಿಭಟನೆ