ಶಿರಸಿ: ಭಾರತೀಯ ಪರಂಪರೆಯಲ್ಲಿ ಕೃಷಿ ಕೇವಲ ಉದ್ಯೋಗವಲ್ಲ, ಅದೊಂದು ಸಂಸ್ಕಾರ. ಇಂದಿನ ಯುವ ಪೀಳಿಗೆ ಕೃಷಿಯಿಂದ ದೂರ ಸರಿಯುತ್ತಿರುವ ಕಾಲಘಟ್ಟದಲ್ಲಿ, ಮಠ-ಮಾನ್ಯಗಳು ಕೃಷಿ ಜಯಂತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.
ರೈತ ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಘೋಷಣೆಯಾಗಬಾರದು. ರೈತರಿಗೆ ಆರ್ಥಿಕ ಭದ್ರತೆ ನೀಡುವ ಜತೆಗೆ ಅವರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಧಾರ್ಮಿಕ ಸಂಸ್ಥೆಗಳು ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಕೃಷಿ ಕ್ಷೇತ್ರವು ಸವಾಲುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನವು ರೈತ ಸಮುದಾಯಕ್ಕೆ ಹೊಸ ಚೇತನ್ಯ ನೀಡುತ್ತಿದೆ ಎಂದು ಅಭಿಪ್ರಾಯಪಟ್ಟರು.ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು 18ನೇ ಕೃಷಿ ಜಯಂತಿಯನ್ನು ಉದ್ಘಾಟಿಸಿದರು. ಜೀವನದಲ್ಲಿ ನೈತಿಕತೆ ಮತ್ತು ತಾಳ್ಮೆಯ ಮಹತ್ವದ ಬಗ್ಗೆ ಆಶೀರ್ವಚನದಲ್ಲಿ ನುಡಿದರು.