ಕೃಷಿ ಸಚಿವರ ಹುಟ್ಟುಹಬ್ಬ: ರೈತರಿಗೆ ತೆಂಗಿನ ಸಸಿ ವಿತರಣೆ

KannadaprabhaNewsNetwork |  
Published : Jun 02, 2025, 12:07 AM IST
1ಕೆಎಂಎನ್ ಡಿ19 | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಕೊಪ್ಪದಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರೈತರಿಗೆ ತೆಂಗಿನ ಸಸಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ಜಿಲ್ಲೆಯ ಅಭಿವೃದ್ಧಿಯಲ್ಲಿ ಹಲವು ರಾಜಕೀಯ ಮುಖಂಡರ ದುಡಿಮೆ ಇದೆ. ಇದರಲ್ಲಿ ಕೃಷಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಪಾರವಾಗಿ ಶ್ರಮಿಸುವ ಮೂಲಕ ಜನರ ಹೃದಯದಲ್ಲಿ, ಶಾಶ್ವತವಾದ ಸ್ಥಾನ ಪಡೆದಿದ್ದಾರೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ಕ್ರಾಂತಿಸಿಂಹ ಮಾತನಾಡಿ, ಸಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಹಂತ ಹಂತವಾಗಿ ಬೆಳೆದು ಕೃಷಿ ಸಚಿವರಾಗಿ ಜನಪ್ರಿಯ ನಾಯಕರಾಗಿ ಇದ್ದ ಕಾಲಘಟ್ಟದಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಂತ ದಿಟ್ಟ ನಿರ್ಧಾರ ಮಾಡಿರುವುದು ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದರು.

ಸಚಿವರ ಆಶಯದಂತೆ ರೈತರಿಗೆ ತೆಂಗಿನ ಸಸಿ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೃಷಿ ಸಚಿವರ ಕೈ ಬಲಪಡಿಸುವ ಕೆಲಸ ಮಾಡೋಣ. ಆ ಮೂಲಕ ಸಮಸಮಾಜದ ನಿರ್ಮಾಣಕ್ಕಾಗಿ ಎಲ್ಲರೂ ದುಡಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ನಿರ್ದೇಶಕರಾದ ತರೀಕೆರೆ ಟಿ.ಎಂ.ರಾಜಶೇಖರ್, ಕೊಪ್ಪದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ರಮೇಶ್ ಕೊಪ್ಪ, ಮುಖಂಡರಾದ ಬಿದರಕೋಟೆ ಯೋಗೇಶ್, ಜಿ.ಆರ್.ನವೀನ್ ಕುಮಾರ್, ಶಂಕರಣ್ಣ, ತರೀಕೆರೆ ಅನಿಲ್ ಕುಮಾರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು