ರಸಗೊಬ್ಬರ ದಾಸ್ತಾನುಗಳ ಪರಿಶೀಲಿಸಿದ ಕೃಷಿ ಅಧಿಕಾರಿ

KannadaprabhaNewsNetwork |  
Published : May 19, 2025, 12:28 AM IST
 ಪೋಟೋ: 18 ಜಿಎಲ್‌ಡಿ1- ಗುಳೇದಗುಡ್ಡ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ   ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ.ರೂಡಗಿ  ಅವರು  ಶನಿವಾರ   ದಿಢೀರ  ಭೇಟಿ ನೀಡಿ ರಸಗೊಬ್ಬರ ದಾಸ್ತಾನುಗಳನ್ನು ಪರಿಸೀಲನೆ ಮಾಡಿದರು.  | Kannada Prabha

ಸಾರಾಂಶ

ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.

ಗೊಬ್ಬರವನ್ನು ನಿಗದಿತ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡಿದರೆ ಅಂತಹ ಮಳಗೆಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ರಸಗೊಬ್ಬರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು. ಪರಿಶೀಲನೆ ಸಮಯದಲ್ಲಿ ರಸಗೊಬ್ಬರ ಅಂಗಡಿ ಮಾರಾಟ ಮಳಿಗೆದಾರರು ರಸಗೊಬ್ಬರ ನಿಯಂತ್ರಣ ಆದೇಶ ಹಾಗೂ ಇತರೆ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಲ್ಲಿ ಅಂತಹ ಮಾರಾಟದಾರಿಗೆ ನೋಟಿಸ್ ಜಾರಿ ಮಾಡಿ, ಸೂಕ್ತ ಕಾರಣ ನೀಡದಿದ್ದಲ್ಲಿ ಪರವಾನಗಿ ರದ್ದುಗೊಳಿಸಲಾಗುವುದು. ಸಕಾಲದಲ್ಲಿ ಎಲ್ಲಾ ರೈತರಿಗೆ ಕೃಷಿ ಪರಿಕರಗಳನ್ನು ಯೋಗ್ಯ ಬೆಲೆಗೆ ವಿತರಿಸಬೇಕು. ಮಳಿಗೆಯಲ್ಲಿರುವ ದಾಸ್ತಾನು ವಿವರ ಹಾಗೂ ಮಾರಾಟ ದರವನ್ನು ದರದ ಪಟ್ಟಿಯಲ್ಲಿ ಸ್ಪಷ್ಟವಾಗಿ ರೈತರಿಗೆ ಕಾಣುವಂತೆ ನಮೂದಿಸಬೇಕೆಂದು ತಿಳಿಸಿದರು. ಸಂದರ್ಭದಲ್ಲಿ ತಾಲೂಕು ಕೃಷಿ ಅಧಿಕಾರಿ ಆನಂದ ಗೌಡರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರಣಿ ಸ್ಥಳಕ್ಕೆ ಎಡಿಸಿ ಭೇಟಿ: ಪಟ್ಟು ಬಿಡದ ರೈತರು
ಸಂಕ್ರಮಣದ ಸಂಭ್ರಮದ ತೆಪ್ಪೋತ್ಸವ