ಕಳಪೆ ಗೊಬ್ಬರ ಮಾರಾಟ ಶಂಕೆ, ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ

KannadaprabhaNewsNetwork |  
Published : May 31, 2025, 12:34 AM IST
(30ಎನ್.ಆರ್.ಡಿ1 ಕೃಷಿ ಅಧಿಕಾರಿ ಮಂಜುನಾಥ ಜನಮಟ್ಟಿ ಖಾಸಗಿ ರಸಗೋಬ್ಬರ ಅಂಗಡಿಗಲಗೆ ಭೇಟಿ ನೀಡಿ ಬೀಜ, ಗೋಬ್ಬರ ಪರಶೀಲನೆ ನಡೆಸಿದರು.)  | Kannada Prabha

ಸಾರಾಂಶ

ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.

ನರಗುಂದ: ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.

ಆನಂತರ ಅವರು ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರು ಅಧಿಕೃತ ಮಾರಾಟಗಾರರಿಂದ ಉತ್ತಮ ಗುಣಮಟ್ಟದ ಕೃಷಿ ಪರಿಕರ, ರಸಗೊಬ್ಬರ ಖರೀದಿಸಬೇಕು. ಅನಧಿಕೃತ ಮಾರಾಟಗಾರರಿಂದ ಕಳಪೆ ರಸಗೊಬ್ಬರಗಳು ಮಾರಾಟವಾಗುತ್ತಿವೆ. ಎಂಬುದರ ಬಗ್ಗೆ ಅನುಮಾನಗಳು ಇದ್ದು, ಅಂಥಹ ಮಾರಾಟಗಾರರು ಕಂಡು ಬಂದಲ್ಲಿ ರೈತರು ಕೃಷಿ ಇಲಾಖೆಗೆ ದೂರು ನೀಡಬೇಕೆಂದು ತಿಳಿಸಿದರು.

ಉತ್ತಮ ಗುಣಮಟ್ಟದ ರಸಗೊಬ್ಬರಗಳ ದಾಸ್ತಾನು ಎಲ್ಲಾ ಅಧಿಕೃತ ಕೃಷಿ ಪರಿಕರ ಮಾರಾಟಗಾರರ ಬಳಿ ಇದ್ದು, ಅವಶ್ಯಕತೆಗೆ ತಕ್ಕಂತೆ ರಸಗೊಬ್ಬರ ಖರೀದಿಸಲು ಮತ್ತು ಅನಧಿಕೃತವಾಗಿ ರಸಗೊಬ್ಬರ, ಬೀಜ, ಔಷಧಿ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣವೇ ಮೊಬೈಲ್ ಸಂಖ್ಯೆ 8277931409 ದೂರು ನೀಡಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ