ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ವಿ.ಸಿ.ಫಾರ್ಮ್ ನ ಕೃಷಿ ವಿಶ್ವ ವಿದ್ಯಾಲಯದಲ್ಲಿ ನೂತನವಾಗಿ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕರುಗಳಿಗೆ ನಡೆದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನೂತನವಾಗಿ ರೂಪುಗೊಂಡಿರುವ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅಭಿನಂದನೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ಅಧಿಕಾರಿ/ನೌಕರರಿಗೆ ಹಾಗೂ ಇತರರಿಗೆ ಆಯೋಜಿಸಲ್ಪಟುವ ತರಬೇತಿ ಕಾರ್ಯಕ್ರಮ ಜ್ಞಾನದ ಉನ್ನತಿಗೆ ವೇದಿಕೆಯಗಲಿ ಎಂದು ಶುಭ ಹಾರೈಸಿದರು.ಕೃಷಿ ವಿಜ್ಞಾನಿಗಳು ಹೊಸದಾಗಿ ತಂತ್ರಜ್ಞಾನಗಳ ಅಳವಡಿಕೆ ಮತ್ತು ಉಪಯುಕ್ತತೆಯಿಂದ ಕೃಷಿಯ ವ್ಯಾಪ್ತಿ ಜಾಗತಿಕ ಮಟ್ಟಕ್ಕೂ ವಿಸ್ತರಿಸುತ್ತಿದ್ದಾರೆ. ತರಬೇತಿ ಕಾರ್ಯಕ್ರಮಗಳು, ಜ್ಞಾನದ ಆಗರಗಳಾಗಿ ಸ್ಫೂರ್ತಿದಾಯಕವಾಗಿರುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪ್ರತಿಯೊಬ್ಬ ವಿಜ್ಞಾನಿಯು ಮಾಡುವ ಸಂಶೋಧನಾ ಫಲಿತಾಂಶಗಳು ಕೇವಲ ಸಂಶೋಧನಾ ಪ್ರಬಂಧಗಳಲ್ಲಿ ಉಳಿಯದೇ ರೈತರ ಹೊಲಗದ್ದೆಗಳಲ್ಲಿ ತಂತ್ರಜ್ಞಾನಗಳ ರೂಪದಲ್ಲಿ ಕೃಷಿ ಸಮಸ್ಯೆಗಳಿಗೆ ಪರಿಹಾರವಾಗಿ ಉಪಯೋಗವಾಗಬೇಕು ಎಂದರು.
ಸಮಾರಂಭದಲ್ಲಿ ಕೃಷಿ ವಿವಿ ವಿಶೇಷಾಧಿಕಾರಿ ಡಾ.ಹರಿಣಿಕುಮಾರ್ ಸೇರಿದಂತೆ ಹಲವರು ಇದ್ದರು.
ಮಂಡ್ಯ:
ಜೆಎಸ್ಎಸ್ ಮಹಿಳಾ ಕಾಲೇಜಿನ ಪದವಿ ವಿದ್ಯಾರ್ಥಿನಿ ಎಂ.ಎಸ್.ಪುಣ್ಯ 2 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಗೆದ್ದರೆ, ಸೇಫಿಯಂಟ್ ಕಾಲೇಜಿನ ಪಿ.ವರ್ಷಿಣಿ 1 ಚಿನ್ನ, 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗೆದ್ದು ವಿಜೇತರಾಗಿದ್ದಾರೆ.
ಈ ಸ್ಪರ್ಧೆಯಲ್ಲಿ 10 ಮೀ ರೈಫಲ್, 50 ಮೀ ರೈಫಲ್, ಪಿಸ್ತೂಲ್ ಈವೆಂಟ್ಗಳು, ಟ್ರ್ಯಾಪ್ ಮತ್ತು ಸ್ಕೀಟ್ ಸೇರಿದಂತೆ ಎಲ್ಲಾ ರೀತಿಯ ಶೂಟಿಂಗ್ ಕ್ರೀಡೆಗಳು ನಡೆದು ಮೈಸೂರು ಶೂಟಿಂಗ್ ಕ್ಲಬ್ ನಿಂದ ಪಾಲ್ಗೊಂಡಿದ್ದ ಶೂಟರ್ಗಳು ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಮುಂದಿನ ಹಂತಕ್ಕೆ (ದಕ್ಷಿಣ ವಲಯಗಳು) ಅರ್ಹತೆ ಪಡೆದಿದ್ದಾರೆ. 50 ಮೀ ರೈಫಲ್ ಎನ್ಆರ್ನಲ್ಲಿ 5 ವೈಯಕ್ತಿಕ ಪದಕಗಳನ್ನು ಮತ್ತು ಐಎಸ್ಎಸ್ಎಫ್ ಈವೆಂಟ್ಗಳಲ್ಲಿ 4 ಪದಕಗಳನ್ನು ಗೆದ್ದಿರುವ ಮೈಸೂರು ಶೂಟಿಂಗ್ ಕ್ಲಬ್ ತಂಡಕ್ಕೆ ರಾಷ್ಟ್ರೀಯ ಪ್ಯಾರಾ ಶೂಟರ್ ಬಿ.ಆರ್.ದರ್ಶನ್ ಕುಮಾರ್ (ಮೈಸೂರು) ಉತ್ತಮ ತರಬೇತಿ ನೀಡಿದ್ದರು.