ಉತ್ತಮ ಆಡಳಿತದಿಂದ ಅಹಲ್ಯಾ ಬಾಯಿ ಸಮಾಜಕ್ಕೆ ಮಾದರಿ: ಮಂಜುಳಾ

KannadaprabhaNewsNetwork |  
Published : Jun 01, 2025, 04:03 AM ISTUpdated : Jun 01, 2025, 04:04 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಲೋಕಮಾತೆ ಅಹಲ್ಯ ಬಾಯಿ ಹೊಳ್ಕರ್ ರವರ 300ನೇ ಜಯಂತಿ ಕಾರ್ಯಕ್ರಮವನ್ನು ಮಂಜುಳಾ ಅವರು ಉದ್ಘಾಟಿಸಿದರು. ಜಸಂತಾ ಅನಿಲ್‌ಕುಮಾರ್, ದೇವರಾಜ್‌ ಶೆಟ್ಟಿ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಭಾರತೀಯರ ಮನದಾಳದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದಿರುವ ಅಹಲ್ಯಾ ಬಾಯಿ ಹೊಳ್ಕರ್ ಉತ್ತಮ ಆಡಳಿತ, ಜನಾನುರಾಗಿ ಕಾರ್ಯ ಮತ್ತು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಳಿಂದಾಗಿ ಮಾದರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಲೋಕಮಾತೆ ಅಹಲ್ಯಾ ಬಾಯಿ ಹೊಳ್ಕರ್ 300ನೇ ಜಯಂತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಭಾರತೀಯರ ಮನದಾಳದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದಿರುವ ಅಹಲ್ಯಾ ಬಾಯಿ ಹೊಳ್ಕರ್ ಉತ್ತಮ ಆಡಳಿತ, ಜನಾನುರಾಗಿ ಕಾರ್ಯ ಮತ್ತು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಳಿಂದಾಗಿ ಮಾದರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಶನಿವಾರ ಏರ್ಪಡಿಸಿದ್ದ ಲೋಕಮಾತೆ ಅಹಲ್ಯಾ ಬಾಯಿ ಹೊಳ್ಕರ್ 300ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾರಾಷ್ಟ್ರದಲ್ಲಿ ಜನಿಸಿ ಮಧ್ಯಪ್ರದೇಶದ ಸೊಸೆಯಾಗಿ ತೆರಳಿದ ಅಹಲ್ಯಾ ಬಾಯಿ ಸತತ ಮೂರು ದಶಕ ರಾಜ್ಯದ ಆಳ್ವಿಕೆ ನಿಭಾಯಿಸಿ ನಾರಿ ಶಕ್ತಿಯನ್ನು ಎತ್ತಿಹಿಡಿದವರು. ಅತಿ ಕಡಿಮೆ ವಯಸ್ಸಿನಲ್ಲಿ ಬಾಲ್ಯ ವಿವಾಹವಾಗಿ ಪತಿಯನ್ನೇ ಕಳೆದು ಕೊಂಡ ಅವರು ಇಡೀ ರಾಜ್ಯಭಾರವನ್ನು ಹತೋಟಿಗೆ ತಂದು ಬಾಲ್ಯವಿವಾಹ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಿದರು ಎಂದರು.

ಮಹಿಳಾ ಸಬಲೀಕರಣಕ್ಕಾಗಿ ನೇಯ್ಗೆ ವೃತ್ತಿ, ಹತ್ತಿ ಬೆಳೆ ಕೃಷಿ ಹಾಗೂ ಆಭರಣ ತಯಾರಿಸುವ ತರಬೇತಿಗಳನ್ನು ಹೆಣ್ಣು ಮಕ್ಕಳಿಗೆ ಒದಗಿಸಿ ಸ್ವಾವಲಂಬಿ ಬದುಕಿಗೆ ಭದ್ರ ಬುನಾದಿ ಹಾಕಿದ್ದರು. ಅಲ್ಲದೇ ರಾಜ್ಯದ ಆಳ್ವಿಕೆಯಲ್ಲೂ ಮಹಿಳಾ ಸೈನ್ಯ ವನ್ನು ಬಲಿಷ್ಠಗೊಳಿಸಿ ವಿರೋಧಿ ಪಡೆಗಳ ಆಕ್ರಮಣದಿಂದ ಗೆಲುವು ಸಾಧಿಸಿದ ಕೀರ್ತಿ ಅವರಿಗೆ ದಕ್ಕಿದೆ ಎಂದು ಹೇಳಿದರು.ದೇಶದ ಹನ್ನೇರಡು ಜ್ಯೋರ್ತಿಲಿಂಗ ಜೀರ್ಣೋದ್ದಾರ, ನಾಡಿನ ಕರಾವಳಿ ಪ್ರದೇಶದ ದೇವಾಲಯ ನಿರ್ಮಾಣಕ್ಕೆ ಸಹಕಾರ ನೀಡಿ ಭವಿಷ್ಯದ ಪ್ರಜೆಗಳಿಗೆ ಭಾರತೀಯ ಸಂಸ್ಕೃತಿಗೆ ಜೀವ ತುಂಬಿದವರು. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಹಲ್ಯಾರ ಹೆಸರಿನಲ್ಲಿ ವಿಮಾನ ನಿಲ್ದಾಣ, ವಿಶ್ವವಿದ್ಯಾಲಯ ಮತ್ತು ಗ್ರಂಥಾಲಯ ನಿರ್ಮಿಸಿ ಗೌರವಿಸಿದೆ ಎಂದರು.ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸ್ತ್ರೀ ಸಮಾಜ ಶೈಕ್ಷಣಿಕ, ಆರ್ಥಿಕ ಪ್ರಗತಿ ಹೊಂದಲು ಸ್ತ್ರೀಶಕ್ತಿ ಸಂಜೀವಿನಿಯಡಿ ಸ್ವಾವಲಂಬಿ ಉತ್ಪನ್ನಗಳಿಗೆ ಒತ್ತು ನೀಡಿದ ಪರಿಣಾಮ ಸಂಜೀವಿನಿ ಒಕ್ಕೂಟದಿಂದ 500 ಕೋಟಿ ವಹಿವಾಟು ನಡೆಸಿ ಸಾಧನೆ ಮಾಡಿವೆ. ಆದರೆ, ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ಮಹಿಳೆಯರು ಬಸ್‌ಗಳಲ್ಲಿ ಗಲಾಟೆ ಮಾಡಿಕೊಳ್ಳುವ ಸ್ಥಿತಿ ನಿರ್ಮಿಸಿದೆ ಎಂದು ಆರೋಫಿಸಿದರು.

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಹಲ್ಯಾ ಅವರು ಸಣ್ಣ ವಯಸ್ಸಿನಲ್ಲೇ ಗಂಡನನ್ನು ಕಳೆದುಕೊಂಡರೂ ದೃತಿಗೆಡದೇ ರಾಜ್ಯದ ಆಳ್ವಿಕೆಯನ್ನು ಚಾಕಚಾಕ್ಯತೆಯಿಂದ ನಿರ್ವಹಿಸಿ ಮಹಿಳಾ ಲೋಕಕ್ಕೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ ಶೆಟ್ಟಿ ಮಾತನಾಡಿ, ರಾಷ್ಟ್ರದಲ್ಲಿ ಮಹಾ ಪುರುಷರು ಸಾಧನೆಗೈಯಲು ತಾಯಿ, ಮಡದಿ ಬೆನ್ನಿಂದ ಶಕ್ತಿಯಾಗಿ ನಿಂತಿರಲು ಸಾಧ್ಯವಾಗಿದೆ. ಹೀಗಾಗಿ ನಾರಿಯ ಶಕ್ತಿ ಅತ್ಯಂತ ಪರಿಣಾಮಕಾರಿಯಾಗಿದೆ. ಅದೇ ರೀತಿ ಅಹಲ್ಯರ ಜೀವನಚರಿತ್ರೆಗಳನ್ನು ಪಾಲಕರು ಸೇರಿದಂತೆ ಮಕ್ಕಳು ಕೆಲ ಕಾಲ ಓದಬೇಕು ಎಂದು ತಿಳಿಸಿದರು.

ಇದೇ ವೇಳೆ ವಾಗ್ಮಿ ಸುಮಾ ಪ್ರಸಾದ್ ಅವರು ಅಹಲ್ಯ ಬಾಯಿ ಹೊಳ್ಕರ್ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಸುವರ್ಣ, ಕಾರ್ಯಕಾರಿಣಿ ಸದಸ್ಯೆ ವಿಜಯಲಕ್ಷ್ಮೀ, ಮಹಿಳಾ ಮೋರ್ಚಾ ಜಿಲ್ಲಾ ಪ್ರಭಾರಿ ನಾರಾಯಣ ಗೌಡ, ಜಿಲ್ಲಾ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶೃತಿ ರೋಹಿತ್, ರಾಜೇಶ್ವರಿ ರಾಜಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ನರೇಂದ್ರ, ಪುಣ್ಯಪಾಲ್, ಬೆಳವಾಡಿ ರವೀಂದ್ರ, ಸಾಮಾಜಿಕ ಜಾಲತಾಣ ಪ್ರಮುಖ್ ಚೈತ್ರಗೌಡ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್‌ 31 ಕೆಸಿಕೆಎಂ 3ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಲೋಕಮಾತೆ ಅಹಲ್ಯ ಬಾಯಿ ಹೊಳ್ಕರ್ ರವರ 300ನೇ ಜಯಂತಿ ಕಾರ್ಯಕ್ರಮವನ್ನು ಮಂಜುಳಾ ಅವರು ಉದ್ಘಾಟಿಸಿದರು. ಜಸಂತಾ ಅನಿಲ್‌ಕುಮಾರ್, ದೇವರಾಜ್‌ ಶೆಟ್ಟಿ ಇದ್ದರು.

--------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ