ಮಹಿಳೆ ಪ್ರಬಲಳೆಂಬ ಸಂದೇಶ ಸಾರಿದ್ದ ಅಹಲ್ಯಾಬಾಯಿ: ಶಿಲ್ಪಾ ಚಂದ್ರು ಬಾಣಾವರ

KannadaprabhaNewsNetwork |  
Published : Jun 03, 2025, 12:15 AM IST
ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಹಲ್ಯಾಬಾಯಿ ಹೋಳ್ಕರ್ ಸಂಘದ ಅಧ್ಯಕ್ಷೆ  ಶಿಲ್ಪ ಚಂದ್ರು ಮಾತನಾಡಿದರು | Kannada Prabha

ಸಾರಾಂಶ

ಮಹಿಳೆಯರ ಸಬಲೀಕರಣಕ್ಕೆ ನೀಡಿದ ಕೊಡುಗೆ ಹಾಗೂ ಹಿಂದೂಗಳ ಪವಿತ್ರ ಧಾರ್ಮಿಕ ಯಾತ್ರಾ ಕ್ಷೇತ್ರವಾಗಿರುವ ಕಾಶಿ ದೇವಾಲಯದ ಜೀರ್ಣೋದ್ಧಾರ ಮಾಡಿದ ರೀತಿ ಹೀಗೆ ಅವರಲ್ಲಿದ್ದ ಸಾಮಾಜಿಕ ಕಳಕಳಿಯಿಂದಲೇ ಅವರು ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ .

ಕನ್ನಡಪ್ರಭ ವಾರ್ತೆ ಅರಸೀಕೆರೆ ಮಹಿಳೆ ದುರ್ಬಲಳು ಎನ್ನುತ್ತಿದ್ದ ಕಾಲಘಟ್ಟದಲ್ಲಿ ಮಹಿಳೆ ದುರ್ಬಲ ಅಲ್ಲ ಪ್ರಬಲಳು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಅಹಲ್ಯಾಬಾಯಿ ಹೋಳ್ಕರ್ ಸ್ತ್ರೀ ಶಕ್ತಿಯ ಧ್ಯೋತಕ ಎಂದು ಅಹಲ್ಯಾಬಾಯಿ ಹೋಳ್ಕರ್ ಸಂಘದ ಅಧ್ಯಕ್ಷೆ ಶಿಲ್ಪಾ ಚಂದ್ರು ಬಾಣಾವರ ಹೇಳಿದರು.

ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ವರ್ಷದ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಮಾತೆಯಾಗಿದ್ದ ಅಹಲ್ಯಾಬಾಯಿ, ಮಹಿಳೆಯರ ಸಬಲೀಕರಣಕ್ಕೆ ನೀಡಿದ ಕೊಡುಗೆ ಹಾಗೂ ಹಿಂದೂಗಳ ಪವಿತ್ರ ಧಾರ್ಮಿಕ ಯಾತ್ರಾ ಕ್ಷೇತ್ರವಾಗಿರುವ ಕಾಶಿ ದೇವಾಲಯದ ಜೀರ್ಣೋದ್ಧಾರ ಮಾಡಿದ ರೀತಿ ಹೀಗೆ ಅವರಲ್ಲಿದ್ದ ಸಾಮಾಜಿಕ ಕಳಕಳಿಯಿಂದಲೇ ಅವರು ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ ಎಂದು ತಮ್ಮ ನುಡಿ ನಮನ ಸಲ್ಲಿಸಿದರು.

ಸಂಘದ ಉಪಾಧ್ಯಕ್ಷೆ ಕಾವ್ಯ ಮಾತನಾಡಿ, ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರಿನಲ್ಲಿ ನಾವು ಸ್ಥಾಪಿಸಿಕೊಂಡಿರುವ ಸಹಕಾರ ಸಂಘದಲ್ಲಿ ಕೇವಲ ಹಣದ ವ್ಯವಹಾರ ಮಾತ್ರ ಮಾಡುತ್ತಿಲ್ಲ, ಅಹಲ್ಯಾಬಾಯಿ ಹೋಳ್ಕರ್ ಅವರ ಸಂದೇಶವನ್ನು ಸಹಕಾರ ಸಂಘವು ಪಾಲಿಸುತ್ತಾ ಜೊತೆಗೆ ಸಮಾಜದ ಮಹಿಳೆಯರನ್ನು ಸಂಘಟಿಸುವ ಕೆಲಸ ಮಾಡುತ್ತಾ ಅಹಲ್ಯಾಬಾಯಿ ಹೋಳ್ಕರ್ ಅವರಿಗೆ ಗೌರವ ಸಮರ್ಪಿಸುತ್ತಿದ್ದೇವೆ ಎಂದರು.

ಸಮಾರಂಭದಲ್ಲಿ ಸಹಕಾರ ಸಂಘದ ಗೌರವ ಅಧ್ಯಕ್ಷೆ ಯಶೋದಮ್ಮ,ನಿರ್ದೇಶಕರಾದ ಯಮುನಾ, ಮೀನಾಕ್ಷಮ್ಮ,ವನಜಾಕ್ಷಿ, ಲಲಿತಮ್ಮ, ನೇತ್ರಾವತಿ, ಚೇತನಾ ,ಗೀತಾಮಣಿ, ವಿಶಾಲಾಕ್ಷಿ, ಕಾರ್ಯದರ್ಶಿ ಭಾಗ್ಯಲಕ್ಷ್ಮೀ, ಕುರುಬ ಸಮಾಜದ ಮುಖಂಡರಾದ ಚಂದ್ರು ಬಾಣಾವರ, ವಿಜಯ್ ಕುಮಾರ್, ತಿಮ್ಮೇಗೌಡ ಹಾಗೂ ಹೋಳ್ಕರ್ ಅಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ