ಕನ್ನಡಪ್ರಭ ವಾರ್ತೆ ಕಲಬುರಗಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯು ಕಾಯ್ದೆಯಾಗಿದ್ದು, ಯುಪಿ1 ಸರ್ಕಾರವಿದ್ದಾಗ ಎಡಪಕ್ಷಗಳ ಶರತ್ತಿನಿಂದಾಗಿ ಕಾಯ್ದೆ ಜಾರಿಯಾಗಿತ್ತು. ಕಾಯ್ದೆ ಜಾರಿಯಲ್ಲಿ ಇಂದಿಗೂ ಅನೇಕ ಸಮಸ್ಯೆಗಳು ಆಗುತ್ತಿವೆ. ಕಾಯ್ದೆಯ ಉಳಿವಿಗಾಗಿ ಸರ್ಕಾರ ಶ್ರಮಿಸದೇ ಮೂಲೆಗೆ ತಳ್ಳಲು ಬೇಕಾದ ನಿಯಮಗಳನ್ನು ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಬೇಸಿಗೆ ಆರಂಭವಾಗಿದ್ದು, ಕಾರ್ಮಿಕರಿಗೆ ಅನೇಕ ಜೀವ ಹಾನಿಗಳು ಸಂಭವಿಸುತ್ತಿವೆ. ಜಿಲ್ಲೆಯ ಕಮಲಾಪುರ ತಾಲ್ಲೂಕಿನ ವಿಕೆ ಸಲಗರ್ ಗ್ರಾಮದ ಚನ್ನಪ್ಪ ಎಂಬ ವ್ಯಕ್ತಿಯ ಸಾವಾಗಿದೆ. ಕೇಂದ್ರ ಸರ್ಕಾರವು ಅನಾವಶ್ಯಕವಾಗಿ ತಂದಿರುವ ಎನ್ಎಂಎಂಎಸ್ ಪದ್ದತಿಯು ಕಾರ್ಮಿಕರಿಗೆ ಮಾರಕವಾಗಿದೆ. ಕಲ್ಯಾಣ ಕರ್ನಾಟಕವು ಉರಿಬಿಸಿಲಿನಿಂದ ಕೂಡಿದೆ. ತಾಂತ್ರಿಕ ಕಾರಣವೊಡ್ಡಿ ಕೆಲಸಗಳ ಸ್ಥಳಕ್ಕೆ ಬೆಳಿಗ್ಗೆ ಬರುವ ಕಾರ್ಮಿಕರನ್ನು ಮಧ್ಯಾಹ್ನದಿಂದ ಸಂಜೆಯವರೆಗೂ ಕಾಯಬೇಕು. ಮನೆಯಿಂದ ಕೆಲಸದ ಸ್ಥಳಕ್ಕೆ ಬರುವುದು, ಫೋಟೋಕ್ಕಾಗಿ ಕಾಯುವುದು, ಕೆಲಸ ಮಾಡಿದ ಮೇಲೂ ಮತ್ತೆ ತಾಸುಗಂಟಲೇ ಫೋಟೋಕ್ಕಾಗಿ ಕಾಯುವುದು ಹೀಗೆ ಕನಿಷ್ಠ ಏಳರಿಂದ ಎಂಟು ತಾಸು ಕಾರ್ಮಿಕರಿಗೆ ಹೊರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರವು ಬಾಕಿ ಉಳಿಸಿಕೊಂಡ ಎಲ್ಲ ಹಣ ಬಿಡುಗಡೆ ಮಾಡುವಂತೆ, ದುಡಿಯುವ ಮಾನವ ದಿನಗಳನ್ನು 200 ದಿನಗಳಿಗೆ ಹೆಚ್ಚಿಸುವಂತೆ, ಎನ್ಎಂಎಂಎಸ್ ತಾಂತ್ರಿಕ ಅಡ್ಡಿಯನ್ನು ಕೂಡಲೇ ಕೈಬಿಡುವಂತೆ, ಇಕೆವೈಸಿ ಕಡ್ಡಾಯವನ್ನು ಕೂಡಲೇ ರದ್ದುಗೊಳಿಸುವಂತೆ, ದಿನದ ಕೂಲಿಯನ್ನು 700 ರು.ಗಳಿಗೆ ಹೆಚ್ಚಿಸುವಂತೆ, ಮೃತ ಚನ್ನಪ್ಪ ತಂದೆ ನಾಗಪ್ಪ ಕುಟುಂಬಕ್ಕೆ ಉದ್ಯೋಗ ಖಾತ್ರಿ ಕಾಯ್ದೆ ಪ್ರಕಾರ 2 ಲಕ್ಷ ರೂ.ಗಳ ಪರಿಹಾರ ಕೊಡುವಂತೆ, ಕೆಲಸದ ಸ್ಥಳಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ, ಮಾರ್ಚ್ 31ರವರೆಗೂ ಕೆಲಸ ಬಯಸುವ ಎಲ್ಲ ಕುಟುಂಬಗಳಿಗೆ ಈಗಾಗಲೇ ಇರುವ 100 ಮಾನವ ದಿನಗಳನ್ನು ಒದಗಿಸುವಂತೆ, ಕೇವಲ 20 ಕಾಮಗಾರಿಗಳನ್ನು ಕೈಗೊಳ್ಳುವ ನಿರ್ಬಂಧತೆ ಕೈಬಿಡುವಂತೆ ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಮೀನಾಕ್ಷಿ ಬಾಳಿ, ಭೀಮಶೆಟ್ಟಿ ಯಂಪಳ್ಳಿ, ಶರಣಬಸಪ್ಪ ಮಮಶೆಟ್ಟಿ, ಡಾ. ಸಾಯಬಣ್ಣ ಗುಡುಬಾ, ಪದ್ಮಿನಿ ಕಿರಣಗಿ, ಚಂದಮ್ಮ ಗೋಳಾ, ಮೇಘರಾಜ್ ಕಠಾರೆ ಮುಂತಾದವರು ಉಪಸ್ಥಿತರಿದ್ದರು.