ಸೈಬರ್ ಸೆಕ್ಯೂರಿಟಿಯಲ್ಲಿ ಎಐ ತಂತ್ರಜ್ಞಾನ ಪ್ರಮುಖ: ಪ್ರಶಾಂತ ಬಡಿಗೇರ

KannadaprabhaNewsNetwork |  
Published : Feb 13, 2024, 12:46 AM IST
 (ಫೋಟೋ 12ಬಿಕೆಟಿ2, ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನಫಾಮರ್ೇಶನ್ ಸಾಯನ್ಸ ವಿಭಾಗದಿಂದ ವಿದ್ಯಾರ್ಥಿಗಳಿಗೆ ಎಐ ಇನ್ ಸೈಬರ್ ಸೆಕ್ಯೂರಿಟಿ ಎಂಬ ವಿಷಯದ ಕುರಿತು ಹಮ್ಮಿಕೊಂಡ ಮೂರು ದಿನಗಳ ಕೌಶಲ್ಯ ಕಾರ್ಯಾಗಾರ) | Kannada Prabha

ಸಾರಾಂಶ

ಬಾಗಲಕೋಟೆ: ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಯಲ್ಲಿ ಕ್ರತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ಕಂಪನಿಗಳು ತಮ್ಮ ಸೈಬರ್ ಸೆಕ್ಯೂರಿಟಿ ಕಾರ್ಯತಂತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪ್ರಮುಖ ಸಾಧನವನ್ನಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯ ಐಸೆಕ್ ಸೈಬರ್ ಸೆಕ್ಯೂರಿಟಿ ಸಲ್ಯೂಷನ್ಸ್ ನ ಮುಖ್ಯ ಎಂಜಿನಿಯರ್ ಪ್ರಶಾಂತ ಬಡಿಗೇರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಯಲ್ಲಿ ಕ್ರತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ಕಂಪನಿಗಳು ತಮ್ಮ ಸೈಬರ್ ಸೆಕ್ಯೂರಿಟಿ ಕಾರ್ಯತಂತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪ್ರಮುಖ ಸಾಧನವನ್ನಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯ ಐಸೆಕ್ ಸೈಬರ್ ಸೆಕ್ಯೂರಿಟಿ ಸಲ್ಯೂಷನ್ಸ್ ನ ಮುಖ್ಯ ಎಂಜಿನಿಯರ್ ಪ್ರಶಾಂತ ಬಡಿಗೇರ ನುಡಿದರು.

ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನಫಾರ್ಮೇಶನ್ ಸೈನ್ಸ್‌ ವಿಭಾಗದಿಂದ ವಿದ್ಯಾರ್ಥಿಗಳಿಗೆ ಎಐ ಇನ್ ಸೈಬರ್ ಸೆಕ್ಯೂರಿಟಿ ವಿಷಯದ ಕುರಿತು ಹಮ್ಮಿಕೊಂಡ ಮೂರು ದಿನಗಳ ಕೌಶಲ್ಯ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಐಟಿ ತಂತ್ರಜ್ಞಾನದ ಮೇಲೆ ಅವಲಂಬಿತವಾಗುತ್ತಿರುವ ಇಂದಿನ ದಿನಗಳಲ್ಲಿ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿವೆ. ತಾಂತ್ರಿಕ ಕ್ಷೇತ್ರವು ಸೈಬರ್ ಭದ್ರತೆಯಲ್ಲಿ ವೃತ್ತಿಪರ ಎಂಜಿನಿಯರುಗಳ ಕೊರತೆ ಎದುರಿಸುತ್ತಿದೆ ಎಂದು ಹೇಳಿದರು. ಐಎಸ್ಸಿ ವಿಭಾಗದ ಮುಖ್ಯಸ್ಥ ಡಾ.ಸಾಧನಾ ಬಂಗಾರಶೆಟ್ಟಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಪ್ರೊ.ಸಂದೀಪ್ ಕೂಗಲಿ ಹಾಗೂ ಪ್ರೊ.ಪಿ.ಕೆ.ದೇಶಪಾಂಡೆ ಕಾರ್ಯಕ್ರಮವನ್ನು ಎಐಸಿಟಿಇ ಐಡಿಯಾ ಲ್ಯಾಬ್ ಸಹಯೋಗದೊಂದಿಗೆ ಸಂಯೋಜನೆ ಮಾಡಿದ್ದರು. ಐಸೆಕ್ ಸೈಬರ್ ಸೆಕ್ಯೂರಿಟಿ ಸೊಲ್ಯೂಷನ್ಸ್ ಬೆಳಗಾವಿಯ ಅನೀಶ್ ವೆರ್ಣೆಕರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!