ಕನ್ನಡಪ್ರಭ ವಾರ್ತೆ ಮೈಸೂರು
ಮೊನ್ನೆ ನೀಟ್ ಆದರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್ ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ದೂರಿದ್ದಾರೆ.
ಅಷ್ಟೇ ಅಲ್ಲದೆ, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಪವಿತ್ರತೆಯನ್ನು ಕಾಪಾಡಲು ಪರೀಕ್ಷೆ ನಡೆದ ಮರು ದಿನವೇ ಅದನ್ನು ರದ್ದುಪಡಿಸಿ ಸಿಬಿಐಗೆ ಒಪ್ಪಿಸಲಾಗಿದೆ. ಈ ನಡೆಯು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರದ ಪ್ರಯಾಣ, ವಸತಿ, ಅಧಿಕ ಪ್ರಮಾಣದ ಪರೀಕ್ಷಾ ಶುಲ್ಕ ಸೇರಿದಂತೆ ಮಿಲಿಯಾಂತರ ಅಭ್ಯರ್ಥಿಗಳ ವೆಚ್ಚಕ್ಕೆ ಯಾರು ಹೊಣೆ? ಎಲ್ಲದಕ್ಕೂ ಮಿಗಿಲಾಗಿ ಎನ್ ಟಿಎ ಪ್ರದರ್ಶಿಸುತ್ತಿರುವ ಬೇಜವಾಬ್ದಾರಿ, ಅಸಮರ್ಥತೆ ಮತ್ತು ಪಾರದರ್ಶಕತೆಯ ಕೊರತೆಯು ಮಿಲಿಯಾಂತರ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದುಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವ್ಯಾಪಾರೀಕರಣ, ಅನಾರೋಗ್ಯ ಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರವು ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಏಕಸ್ವಾಮ್ಯಾಧಿಕಾರವನ್ನುಂಟು ಮಾಡಬಲ್ಲದೆ ಹೊರತು, ಈ ಯಾವ ಸಮಸ್ಯೆಯನ್ನೂ ಪರಿಹರಿಸುವುದಿಲ್ಲ ಎಂದು ತಿಳಿಸಿದ್ದಾರೆ.