ಕನ್ನಡಪ್ರಭ ವಾರ್ತೆ ಇಳಕಲ್ಲ
೨೦೨೨- ೨೩ನೇ ಸಾಲಿನ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದಲ್ಲಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೇವಲ ಮಾತನಾಡಿ ಹೋಗುವ ಶಾಸಕ ನಾನಲ್ಲ. ಯಾರ ಅವಧಿಯಲ್ಲಿ ಏನು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂಬುದನ್ನು ದಾಖಲೆ ತೆಗೆದು ನೋಡಿ. ಮತಕ್ಷೇತ್ರದಾದ್ಯಂತ ನಾನು ಹಿಂದೆ ಶಾಸಕನಾಗಿದ್ದಾಗ, ಮತ್ತೆ ಈ ಪ್ರಸ್ತುತ ಅವಧಿಯಲ್ಲಿ ಎಲ್ಲಾ ಕ್ಷೇತ್ರಗಳಿಗನುಗುಣವಾಗಿ ಸಾರ್ವಜನಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಅವಳಿ ನಗರದಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದೇನೆ ಎಂದು ಟೀಕೆ ಮಾಡುವವರಿಗೆ ಉತ್ತರ ನೀಡಿದರು.
ನಗರ ಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು, ಸಾರ್ವಜನಿಕರು ಇದ್ದರು.