ಮಾದರಿ ಶ್ರೀರಂಗಪಟ್ಟಣ ಪುರಸಭೆ ಮಾಡುವ ಗುರಿ: ರಮೇಶ್‌ ಬಂಡಿಸಿದ್ದೇಗೌಡ

KannadaprabhaNewsNetwork |  
Published : Feb 13, 2026, 01:45 AM IST
12ಕೆಎಂಎನ್‌ಡಿ-19ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯಲ್ಲಿ 2 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳು ಹಾಗೂ ಅಭಿವೃದ್ದಿ ಕೆಲಸಗಳಿಗೆ ಶಾಸಕ ರಮೇಶ ಬಂಡಿಸಿದ್ಧೇಗೌಡ ಚಾಲನೆ ನೀಡಿದರು. | Kannada Prabha

ಸಾರಾಂಶ

ಶ್ರೀರಂಗಪಟ್ಟಣದ ಭೋವಿ ಕಾಲೋನಿಯ ಪರಿಮಿತಿಯಲ್ಲಿ 20 ಲಕ್ಷಗಳ ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ, ಹೈಮಾಸ್ಟ್ ಲೈಟ್ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಪಡಿಸುವ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದೆ. ಪುರಸಭಾ ವ್ಯಾಪ್ತಿಯ 3ನೇ ವಾರ್ಡ್ ನ ಪೋಸ್ಟ್ ಆಫೀಸ್ ಸರ್ಕಲ್‌ನಲ್ಲಿ ಅಳವಡಿಸಲಾಗಿರುವ ಮಿನಿ ಹೈಮಾಸ್ಟ್ ಬೀದಿ ದೀಪಗಳಿಗೆ ಚಾಲನೆ ದೊರಕಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣ ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿಸುವ ಗುರಿ ಹೊಂದಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣ ಪುರಸಭಾ ವ್ಯಾಪ್ತಿಯಲ್ಲಿ 2 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳು ಹಾಗೂ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ರಸ್ತೆ, ಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದರ ಜೊತೆ 44 ಲಕ್ಷ ರು. ವೆಚ್ಚದ ಪಟ್ಟಣ ಪುರಸಭೆಗೆ ಹೊಸದಾಗಿ ಖರೀದಿಸಿರುವ ಸಕ್ಕಿಂಗ್/ಜಟ್ಟಿಂಗ್ ಮಷಿನ್ ವಾಹನಕ್ಕೆ ಚಾಲನೆ ನೀಡಿರುವುದಾಗಿ ಹೇಳಿದರು.

ಪಟ್ಟಣ ಭೋವಿ ಕಾಲೋನಿಯ ಪರಿಮಿತಿಯಲ್ಲಿ 20 ಲಕ್ಷಗಳ ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ, ಹೈಮಾಸ್ಟ್ ಲೈಟ್ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಪಡಿಸುವ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದೆ. ಪುರಸಭಾ ವ್ಯಾಪ್ತಿಯ 3ನೇ ವಾರ್ಡ್ ನ ಪೋಸ್ಟ್ ಆಫೀಸ್ ಸರ್ಕಲ್‌ನಲ್ಲಿ ಅಳವಡಿಸಲಾಗಿರುವ ಮಿನಿ ಹೈಮಾಸ್ಟ್ ಬೀದಿ ದೀಪಗಳಿಗೆ ಚಾಲನೆ ದೊರಕಿದೆ ಎಂದರು.

ಉಳಿದಂತೆ ಶ್ರೀರಂಗನಾಥ ದೇವಾಲಯ ಹಾಗೂ ಶ್ರೀ ನಿಮಿಷಾಂಬ ದೇವಿ ದೇವಾಲಯಗಳ ಅಭಿವೃದ್ಧಿಯ ಸಿದ್ಧತೆ ಕೈಗೊಳ್ಳಲಾಗಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ 94 ಲಕ್ಷ ರು. ವೆಚ್ಚದಲ್ಲಿ 30 ಮಳಿಗೆಗಳ ನಿರ್ಮಿಸಲು ಹಣ ಮಂಜೂರಾಗಿದ್ದು ಅದಕ್ಕೂ ಶಂಕು ಸ್ಥಾಪನೆ ನೆರವೇರಿಸಲಾಗಿದೆ.

ನಮ್ಮ ಸರ್ಕಾರ ಬಹುಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದು, ತಾಲೂಕು ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಮಿನಿ ಹೈಮಾಸ್ಟ್ ಬೀದಿ ದೀಪಗಳಿಗೆ ಚಾಲನೆ ನೀಡಿದೆ. ಪ್ರಮುಖವಾಗಿ ಶ್ರೀರಂಗಪಟ್ಟಣ ಪುರಸಭೆಯನ್ನು ಜಿಲ್ಲೆಯಲ್ಲೆ ಮಾದರಿ ಪುರಸಭೆಯನ್ನಾಗಿಸುವ ನಿಟ್ಟಿನಲ್ಲಿ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಎಲ್.ದಿನೇಶ್, ಮಾಜಿ ಸದಸ್ಯರಾದ ಎಂ.ನಂದೀಶ್, ದಯಾನಂದ, ವಸಂತಕುಮಾರಿ, ಕೃಷ್ಣಪ್ಪ, ಕೆ.ಬಿ.ಬಸವರಾಜು, ಪ್ರದೀಪ್, ಮಾಜಿ ಅಧ್ಯಕ್ಷ ಎಲ್.ನಾಗರಾಜು , ಸೋಮಸುಂದರ್, ಪೈ.ಜೂನಿಯರ್ ಶ್ರಿಕಂಠು ಸೇರಿದಂತೆ ಮುಖಂಡರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

8 ತಿಂಗಳಿಂದ ನೀರಿನ ಸಮಸ್ಯೆ: ಜಗಳೂರು ತಾಪಂಗೆ ಗ್ರಾಮಸ್ಥರಿಂದ ಬೀಗ!
ಹೊಸಕೋಟೆಯಲ್ಲಿ ಸಾರ್ವತ್ರಿಕ ಮುಷ್ಕರ ಯಶಸ್ವಿ