ಬೀದರ್‌ ಕೋಟೆ ಬಾನಂಗಳದಲ್ಲಿ ಏರ್‌ ಶೋ ವೈಭವ

KannadaprabhaNewsNetwork |  
Published : Aug 31, 2024, 01:30 AM IST
ಚಿತ್ರ 30ಬಿಡಿಆರ್57ಎ | Kannada Prabha

ಸಾರಾಂಶ

ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಬೀದರ್‌ ಕೋಟೆಯ ಬಾನಂಗಳದಲ್ಲಿ ರಾಷ್ಟ್ರ ಧ್ವಜ, ಹೃದಯದ ಚಿತ್ರ ಬಿಡಿಸುವ ಮೂಲಕ ಸೂರ್ಯ ಕಿರಣದ ವಿಮಾನಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸಿದವು.

ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಸಿದರು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರ ಮನಸೆಳದವು.

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ ಪರಸ್ಪರ ಒಂದನೊಂದು ಎದುರಿಗೆ ಕ್ರಾಸಿಂಗ್, ಬ್ಯಾರಲ್ ರೋಲ್, ರಾಷ್ಟ್ರೀಯ ಧ್ವಜ ಕೇಸರಿ, ಬಿಳಿ, ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು ಬಿಡುಸುವ ಮೂಲಕ ನೋಡುಗರನ್ನು ಮೂಕವಿಸ್ಮಿತರನ್ನಾಗಿ ಮಾಡುವ ಮೂಲಕ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು.

ಕೆಲವೊಂದು ಸಲ ಒಂಟಿಯಾಗಿ, ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಆಕಾಶದಲ್ಲಿ ಯಾವ ದಿಕ್ಕಿನಿಂದ ವಿಮಾನಗಳು ಬರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ನೋಡುವಂತೆ ಮಾಡಿದ್ದವು. 1996ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ.

9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದಲ್ಲಿಯೆ ಭಾರತದಲ್ಲಿ ಮಾತ್ರ ಇರುವುದು. ಈ ಲೋಹದ ಹಕ್ಕಿಗಳು ಆಕಾಶದಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಜನರ ಮನಸೆಳದವು.

ಇಂದು ಶಾಲಾ ಮಕ್ಕಳಿಗೆ ಪ್ರದರ್ಶನ:

ಆಗಸ್ಟ್ 31ರಂದು ಮಧ್ಯಾಹ್ನ 3 ಗಂಟೆಗೆ ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು, ಬೀದರ ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು ಮಧ್ಯಾಹ್ನ 3 ಗಂಟೆಗಳ ಒಳಗೆ ಬೀದರ ಕೋಟೆಯ ಒಳಗಡೆ ನಿಗಧಿತ ಸ್ಥಳದಲ್ಲಿ ಹಾಜರಿದ್ದು, ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಏರ್ ಶೋ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬೀದರ ನಗರದ ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ