ದಾಬಸ್ಪೇಟೆ: ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಗೆ ಸದಾ ಒತ್ತು ನೀಡುತ್ತೇವೆ. ಆ ನಿಟ್ಟಿನಲ್ಲಿ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಟಾಪರ್ಸ್ಗೆ ವಿಮಾನಯಾನ ಪ್ರವಾಸ ಕೈಗೊಂಡು ಯಶಸ್ವಿಯಾಗಿ ಪೂರೈಸಿದ್ದೇವೆ ಎಂದು ಸೌಂದರ್ಯ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸೌಂದರ್ಯ ರಮೇಶ್ ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಭರತ್ ಸೌಂದರ್ಯ ಮಾತನಾಡಿ, ಮುಂಬರುವ ಶೈಕ್ಷಣಿಕ ವರ್ಷಗಳಲ್ಲಿ ವಿದ್ಯಾರ್ಥಿಗಳು ಈ ಒಂದು ವಿಮಾನಯಾನದ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಉತ್ತೇಜನ ಪೂರ್ವಕವಾಗಿ ಬಳಸಿಕೊಂಡು, ಈ ವರ್ಷ ಆರಂಭ ನೀಡಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ಬಹಳ ವಿರಳ. ಹಾಗಾಗಿ ಈ ಒಂದು ಸದಾವಕಾಶ ಬಳಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಣ ಸಂಯೋಜಕಿ ಶಾರದಾ, ಮುಖ್ಯ ಶಿಕ್ಷಕ ಲಕ್ಷ್ಮೀಕಾಂತ್, ಶಿಕ್ಷಕ ವೃಂದದ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಫೆÇೀಟೋ 1 : ನೆಲಮಂಗಲ ತಾಲೂಕಿನ ಟಿ.ಬೇಗೂರು-ತ್ಯಾಮಗೊಂಡ್ಲು ರಸ್ತೆಯಲ್ಲಿರುವ ಸೌಂದರ್ಯ ನಾಲೆಡ್ಜ್ ಪಾರ್ಕ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಟಾಪರ್ಸ್ಗೆ ಸಂಸ್ಥೆಯ ಸಂಸ್ಥಾಪಕರಾದ ಸೌಂದರ್ಯ ರಮೇಶ್ ವಿಮಾನಯಾನ ಟಿಕೆಟ್ ವಿತರಿಸಿ ಪ್ರವಾಸಕ್ಕೆ ಶುಭ ಕೋರಿದರು.