ಕನ್ನಡಪ್ರಭ ವಾರ್ತೆ ಕಲಬುರಗಿ
ಕೋಳಕೂರಿನ ಹಿರಿಯ ಮುಖಂಡರಾದಂತಹ ಹಾಗೂ ವಕೀಲರಾದ ಅಮೃತಗೌಡ ಪಾಟೀಲರ ಮೊಮ್ಮಗಳಾದ ಶ್ರೇಯಾಂಕಳ ಸಾಧನೆ ಅಪ್ರತಿಮವಾಗಿದೆ. ಇವರು ಆರ್ಸಿಬಿ ತಂಡದಲ್ಲಿ ಉತ್ತಮ ಆಟ ಪ್ರದರ್ಶನ ಮಾಡುತ್ತ ದೇಶಕ್ಕೇ ಕೀರ್ತಿ ತಂದಿದ್ದಾರೆ.
ಆರ್ಸಿಬಿ ಬೆಂಗಳೂರು ತಂಡ ಹಾಗೂ ಐಪಿಎಲ್ನಲ್ಲಿಯೂ ಮತ್ತು ದೇಶದ ಮಹಿಳಾ ಕ್ರಿಕೆಟ್ ತಂಡದಲ್ಲಿಯೂ ಶ್ರೇಯಾಂಕ್ ಪಾಟೀಲ್ ಉತ್ತಮ ಪ್ರದರ್ಶನ ನೀಡುತ್ತ ದೇಶದ ಗಮನ ಸೆಳೆಯುತ್ತಿರೋದು ಖುಷಿಯ ಸಂಗತಿಯಾಗಿದೆ.ಶ್ರೇಯಾಂಕ್ ಪಾಟೀಲರ ಈ ಸಾದನೆ ಜೇವರ್ಗಿ ಜನತೆಗೆ ಅಷ್ಟೇ ಅಲ್ಲ, ಇಡೀ ರಾಜ್ಯಕ್ಕೇ, ಇಡೀದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಶ್ರೇಯಾಂಕ್ ಅವರ ತಂದೆ ರಾಜೇಶ ಪಾಟೀಲ್, ಸಹೋದರ ಆದರ್ಶ ಪಾಟೀಲ್ ಇವರೆಲ್ಲರೂ ಕ್ರಿಕೆಟ್ ಆಟಗಾರರಾಗಿದ್ದಾರೆ. ಬಹಳ ವರ್ಷದಿಂದ ಬೆಂಗಳೂರಲ್ಲಿದ್ದರೂ ಕೋಳಕೂರು ಮರೆತಿಲ್ಲ, ಹಾಗೇ ತಮ್ಮ ನಂಟು ಮುಂದುವರಿಸಿರೋದು ಖುಷಿಯ ಸಂಗತಿಯಾಗಿದೆ.
ಕೋಳಕೂರ್ ಪಾಟೀಲರ ಕುಟುಂಬದ ಕ್ರಿಕೆಟ್ ಪ್ರೇಮ ಮೆಚ್ಚುವಂತಹದ್ದಾಗಿದೆ. ಬರುವ ದಿನಗಳಲ್ಲಿ ಶ್ರೇಯಾಂಕ್ಳ ಸಾದನೆ ಮುಗಿಲೆತ್ತರಕ್ಕೇರಲಿ, ಜೇವರ್ಗಿಯ ಕೀರ್ತಿ, ಜೊತೆಗೇ ರಾಜ್ಯ, ದೇಶದ ಕೀರ್ತಿಯೂ ಜಗದಗಲ, ಮುಗಿಲಗಲ ಪಸರಿಸುವಂತಾಗಲಿ ಎಂದು ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್ ಸಿಂಗ್ ಶುಭ ಹಾರೈಸಿದ್ದಾರೆ.