ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಭಾನುವಾರ ನಗರದ ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ ಮೃತ ಆಕಾಶ ತಂದೆ ಶೇಖರಯ್ಯ ಅವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಕೊಲೆ ಪ್ರಕರಣದ ಬಗ್ಗೆ ಸ್ಪಷ್ಟತೆ ಇಲ್ಲ. ಈಗಾಗಲೇ ಮೃತನ ತಂದೆ ಶೇಖರಯ್ಯ ಅವರು ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ ಕುಲಂಕಷವಾಗಿ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ. ಇನ್ನು ಮರಣೋತ್ತರ ಪರೀಕ್ಷೆಯಲ್ಲಿ ಕೇವಲ ಹಣೆಗೆ ಮಾತ್ರವೇ ಹೊಡೆತ ಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜಾಂಶ ಹೊರಬರಲಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ಸೂಕ್ತ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕಿದೆ.ಕೊಲೆ ಆಗಿದ್ದರೆ ಪೊಲೀಸ್ ಇಲಾಖೆ ಸಂಪೂರ್ಣ ತನಿಖೆ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಅವರೆಲ್ಲರನ್ನೂ ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯಬಾರದು. ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ಮರುಕಳಿಸುತ್ತಿವೆ. ಕಾನೂನು ಸುವ್ಯವಸ್ಥೆಯನ್ನು ತಹಬದಿಗೆ ತರುವ ಕಾರ್ಯವನ್ನ ಪೊಲೀಸರು ಮಾಡಬೇಕು ಎಂದರು.