ರಾಮಭಕ್ತರಿಂದ ಅಖಂಡ ರಾಮನಾಮ ಸ್ಮರಣೆ ಕಾರ್ಯಕ್ರಮ

KannadaprabhaNewsNetwork |  
Published : Jan 22, 2024, 02:17 AM IST
ಗಜೇಂದ್ರಗಡ ಗಂಜಿಪೇಟೆಯ ಶ್ರೀಸೀತಾರಾಮ ಮಂದಿರದ ಆವರಣದಲ್ಲಿ ಮಹಿಳೆಯರು ಶ್ರೀರಾಮನ ಭಜನಾ ಕಾರ್ಯಕ್ರಮ ನಡೆಸಿದರು. | Kannada Prabha

ಸಾರಾಂಶ

ಗಜೇಂದ್ರಗಡ ಪಟ್ಟಣದ ಗಂಜಿಪೇಟೆಯ ಶ್ರೀಸೀತಾರಾಮ ಮಂದಿರ ಹಾಗೂ ಪತ್ತಾರಗಲ್ಲಿಯ ವಿಶ್ವನಾಥ ಸೀತಾ ರಾಮಚಂದ್ರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಜ. ೨೨ರಂದು ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಸಕಲ ಸದ್ಭಕ್ತರು ಅಖಂಡ ರಾಮನಾಮ ಸ್ಮರಣೆ ಕಾರ್ಯಕ್ರಮ ನಡೆಯಿತು.

ಗಜೇಂದ್ರಗಡ: ಪಟ್ಟಣದ ಗಂಜಿಪೇಟೆಯ ಶ್ರೀಸೀತಾರಾಮ ಮಂದಿರ ಹಾಗೂ ಪತ್ತಾರಗಲ್ಲಿಯ ವಿಶ್ವನಾಥ ಸೀತಾ ರಾಮಚಂದ್ರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಜ. ೨೨ರಂದು ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಸಕಲ ಸದ್ಭಕ್ತರು ಅಖಂಡ ರಾಮನಾಮ ಸ್ಮರಣೆ ಕಾರ್ಯಕ್ರಮ ನಡೆಯಿತು.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಭಾನುವಾರ ಬೆಳಗ್ಗೆ ಮಹಿಳೆಯರು ಭಜನಾ ಸಪ್ತಾಹದೊಂದಿಗೆ ಅಖಂಡ ನಾಮಸ್ಮರಣೆ ಕೈಗೊಂಡರು. ಶ್ರೀಗುರು ಜಗನ್ನಾಥದಾಸರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದರೆ, ಸ್ಥಳೀಯ ಅಗಸಿ ಬಳಿಯ ಹನುಮಂತ ದೇವರ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರದಲ್ಲಿ ಶ್ರೀರಾಮನಾಮ ಸ್ಮರಣೆಯನ್ನು ಭಕ್ತರು ನಡೆಸಿದರು.

ಶ್ರೀರಾಮ ಜಯರಾಮ ಜಯಜಯ ರಾಮ ಎಂಬ ನಾಮವನ್ನು ೧೦೮ ಬಾರಿ ಜಪಿಸಿದರು. ೧೧ ಬಾರಿ ಜಪ ಮಾಡುವ ಮೂಲಕ ಏಕಕಾಲಕ್ಕೆ ಮಹಿಳೆಯರಿಂದ ಹೊರಬಂದ ರಾಮನಾಮ ಜಪದ ಸ್ವರಗಳು ಗಮನ ಸೆಳೆದವು.

ಜ.೨೨ರಂದು ಗಂಜಿಪೇಟೆಯ ಶ್ರೀಸೀತಾರಾಮ ಮಂದಿರದಲ್ಲಿ ರಾಮತಾರಕ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಗಳು ನಡೆಯಲಿದೆ. ಪತ್ತಾರಗಲ್ಲಿಯ ವಿಶ್ವನಾಥ ಸೀತಾ ರಾಮಚಂದ್ರ ದೇಗುಲದಲ್ಲಿ ಶ್ರೀರಾಮ ಮೂರ್ತಿಗೆ ಅಭಿಷೇಕ, ಅಲಂಕಾರ ವಿಶೇಷ ಪೂಜೆಯೊಂದಿಗೆ ಸಕಲ ಭಕ್ತರಿಗೆ ಅನ್ನಸಂತರ್ಪಣೆಗೆ ಸಿದ್ಧತೆ ಮಾಡಲಾಗಿದೆ. ಸಂಜೆ ಪಟ್ಟಣದ ಧಾರ್ಮಿಕ ಕೇಂದ್ರಗಳಲ್ಲಿ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ರಾಮನಾಮ ಜಪ, ದೀಪೋತ್ಸವ ಕಾರ್ಯಕ್ರಮಗಳು ವೈಭವ ಪೂರ್ವಕವಾಗಿ ನಡೆಯಲಿದೆ.

ಶ್ರೀರಾಮ ಮಂದಿರ ನಿರ್ಮಾಣದ ಉದ್ಘಾಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಸೇರಿ ಗ್ರಾಮಗಳಲ್ಲಿ ಹಿಂದೂಗಳೆಲ್ಲರೂ ಸಂಭ್ರಮ ಸಡಗರದಿಂದ ದೀಪಾವಳಿ ಹಬ್ಬದಂತೆ ಆಚರಿಸಲು ಮುಂದಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವ ಪ್ರಾಜೆಕ್ಟ್‌ ಮೆಜೆಸ್ಟಿಕ್‌
ಬೀಗ ಹಾಕಿದ ಮನೆಗಳಿಗೆ ಕನ್ನಹಾಕುತ್ತಿದ್ದ ಐವರು ಕಳ್ಳರ ಸೆರೆ