ಪುತ್ತೂರು: ನರಿಮೊಗರು ಗ್ರಾಮದ ಆಲಂಗ-ಶಿಬರ- ನಡುವಾಲ್ ನಿವಾಸಿಗಳ ಬಹುಕಾಲದ ಬೇಡಿಕೆಯಾಗಿರುವ ರಸ್ತೆ ಸಮಸ್ಯೆ ಇತ್ಯರ್ಥ ಪಡಿಸಿದ ಶಾಸಕ ಅಶೋಕ್ ಕುಮಾರ್ ರೈ ನೂತನ ರಸ್ತೆ ನಿರ್ಮಾಣದ ಬಗ್ಗೆ ಭಾನುವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಶಾಸಕ ಅಶೋಕ್ ರೈ ಮತ್ತು ಈ ಭಾಗದ ಜನರು ರಸ್ತೆ ಸಮಸ್ಯೆ ಬಗ್ಗೆ ಕೇಳಿಕೊಂಡಾಗ ನಾವು ನಮ್ಮ ವರ್ಗ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿದ್ದೇವೆ. ಇನ್ನು ಶಿಬರ ಭಾಗದ ಜನರಿಗೆ ರಸ್ತೆ ಸಮಸ್ಯೆಯ ಇರುವುದಿಲ್ಲ. ಈ ರಸ್ತೆಯನ್ನು ಅಭಿವೃದ್ದಿ ಮಾಡುವುದಾಗಿಯೂ ಶಾಸಕರು ಹೇಳಿದ್ದು ಈಗಾಗಲೇ ೫ ಲಕ್ಷ ಅನುದಾನ ನೀಡಿದ್ದಾರೆ ಎಂದು ಜಾಗದ ಮಾಲಿಕ ಕಿಶೋರ್ ತಿಳಿಸಿದ್ದಾರೆ.ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ಪಕ್ಷದ ಮುಖಂಡರಾದ ಬಾಬು ಶೆಟ್ಟಿ ನರಿಮೊಗರು, ಕಾಂಗ್ರೆಸ್ ವಕ್ತಾರ ರವೀಂದ್ರ ರೈ ನೆಕ್ಕಿಲು, ರಾಘವೇಂದ್ರ ಪ್ರಭು, ಚೆನ್ನಪ್ಪ ಗೌಡ, ಮಂಜುನಾಥ ಶೇಖ, ವಲಯ ಮಹಿಳಾ ಘಠಕದ ಅಧ್ಯಕ್ಷೆ ಹರಿಣಾಕ್ಷಿ ಮತ್ತಿತತರರಿದ್ದರು.