ತಿರುಪತಿ ಬೆಟ್ಟದಲ್ಲಿ ಕರಡಿ ಪ್ರತ್ಯಕ್ಷ ಹಿನ್ನೆಲೆ ಆತಂಕ

KannadaprabhaNewsNetwork |  
Published : Aug 07, 2026, 01:30 AM IST
ತಿರುಪತಿ ಬೆಟ್ಟದಲ್ಲಿ ಕರಡಿ ಪ್ರತ್ಯಕ್ಷ ಭಕ್ತರು, ಸಾರ್ವಜನಿಕರಲ್ಲಿ ಆತಂಕ | Kannada Prabha

ಸಾರಾಂಶ

ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಆ ಭಾಗಕ್ಕೆ ತೆರಳುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಡಿ ಕಂಡುಬಂದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದ ಮೇಲೆ ನಿಗಾ ವಹಿಸಿದ್ದಾರೆ. ಕರಡಿ ಮತ್ತೆ ಕಾಣಿಸಿಕೊಂಡರೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಕರಡಿಯ ಸಮೀಪ ಹೋಗಲು ಅಥವಾ ಅದನ್ನು ಕೆಣಕಲು ಪ್ರಯತ್ನಿಸಬಾರದು. ಸುರಕ್ಷಿತ ಅಂತರ ಕಾಯ್ದುಕೊಂಡು ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಅರಸೀಕೆರೆ: ನಗರದ ತಿರುಪತಿ ಬೆಟ್ಟದಲ್ಲಿರುವ ಹನುಮಂತಸ್ವಾಮಿ ದೇವಸ್ಥಾನದ ಸಮೀಪ ಕರಡಿಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕರಡಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ. ವಿಶೇಷವಾಗಿ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಆ ಭಾಗಕ್ಕೆ ತೆರಳುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಡಿ ಕಂಡುಬಂದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದ ಮೇಲೆ ನಿಗಾ ವಹಿಸಿದ್ದಾರೆ. ಕರಡಿ ಮತ್ತೆ ಕಾಣಿಸಿಕೊಂಡರೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಕರಡಿಯ ಸಮೀಪ ಹೋಗಲು ಅಥವಾ ಅದನ್ನು ಕೆಣಕಲು ಪ್ರಯತ್ನಿಸಬಾರದು. ಸುರಕ್ಷಿತ ಅಂತರ ಕಾಯ್ದುಕೊಂಡು ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ, ನಾಡಿದ್ದು ಜಿಲ್ಲಾ ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ
ಸೆ.1ಕ್ಕೆ ದೆಹಲಿ ಚಲೋ: ಸಿಪಿಐನಿಂದ ಜಾಗೃತಿ, ಪಾದಯಾತ್ರೆ