ಕನ್ನಡಪ್ರಭ ವಾರ್ತೆ ಪಾಂಡವಪುರ
ಶಿಬಿರದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಸರೋಜ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆಗೊಳಿಸಲಾಗಿದೆ ಎಂದು ತಿಳಿಸಿದರು.
ಮದ್ಯವ್ಯಸನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ತಲೆದೋರುತ್ತದೆ. ಕುಡಿತದ ಚಟದಿಂದ ಹಲವು ಕುಟುಂಬಗಳು ಬೀದಿಗೆ ಬಂದಿವೆ. ಮದ್ಯವ್ಯಸನಿಗಳು ಯಾವುದೇ ಮುಜುಗರವಿಲ್ಲದೆ ಶಿಬಿರಾರ್ಥಿಗಳಾಗಿ ಭಾಗವಹಿಸಿ ದುಶ್ಚಟದಿಂದ ವಿಮುಖರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು ಎಂದರು.ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆ ತರಲು ಮದ್ಯವರ್ಜನ ಶಿಬಿರಗಳು ಸಹಕಾರಿಯಾಗಿದೆ. ವ್ಯಸನಿಗಳ ಕುಟುಂಬಸ್ಥರು ಕೂಡ ತಮ್ಮ ಕುಟುಂಬದ ಸದಸ್ಯರು ವ್ಯಸನದಿಂದ ಮುಕ್ತರಾಗಲು ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ವರ್ಗಾವಣೆಗೊಂಡ ಕೃಷ್ಣಕುಮಾರ್ಗೆ ಆತ್ಮೀಯ ಬೀಳ್ಕೊಡುಗೆ
ವರ್ಗಾವಣೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಉಪ ನಿರ್ದೇಶಕ ಪ್ರತೀಕ್ ಜಿ.ಹೆಗಡೆ ಅವರಿಗೆ ಸ್ವಾಗತ ಸಮಾರಂಭ ನಗರದ ಖಾಸಗಿ ಸಭಾಂಗಣದಲ್ಲಿ ನಡೆಯಿತು.
ಪಡಿತರ ವಿತರಣೆಯಲ್ಲಿ ಇದ್ದ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಲ್ಲಿ ನ್ಯಾಯಬೆಲೆ ಅಂಗಡಿಗಳವರು ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರಲ್ಲದೆ, ಹೊಸದಾಗಿ ಬಂದಿರುವ ಪ್ರತೀಕ್ ಜಿ. ಹೆಗಡೆ ಅವರಿಗೂ ಇದೇ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಇಲಾಖೆಯ ಉಪನಿರ್ದೇಶಕ ಶ್ರೆನಿವಾಸ್, ಇಲಾಖೆಯ ನಿರೀಕ್ಷಕ ರೇವಣ್ಣ, ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರು, ರಾಜಣ್ಣ, ಪ್ರಕಾಶ್, ನಿಂಗೇಗೌಡ ಸೇರಿದಂತೆ ಇತರರಿದ್ದರು.