ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಹಾರೋಹಳ್ಳಿ ಶ್ರೀಲಕ್ಷ್ಮೀನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಕೆ.ಆರ್.ನಗರ ಜಿಲ್ಲಾಮಟ್ಟದ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.
ಕಳೆದ ಸಾಲಿನಲ್ಲಿ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಜಾಗೃತಿ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರೇ ಭಾಗವಹಿಸಿ ಸಂಸ್ಥೆ ವತಿಯಿಂದ ತಂಬಾಕು ವಿರೋಧಿ, ಮಾದಕ ವಸ್ತುಗಳ ವಿರೋಧಿ ದಿನಾಚರಣೆ ನಡೆಸುವಂತೆ ಸೂಚಿಸಿದ್ದರು ಎಂದರು.ಶಾಲೆಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಮಧ್ಯವರ್ಜನ ಶಿಬಿರಗಳು, ಸ್ವ ಉದ್ಯೋಗ ತರಬೇತಿ ಶಿಬಿರಗಳ ನಡೆಯುವ ಬಗ್ಗೆ ಚರ್ಚಿಸಲಾಗಿತ್ತು. ಅದರಂತೆ ಎಲ್ಲಾ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಯಶಸ್ಸು ಸಾಧಿಸಲಾಗಿದೆ ಎಂದರು.
ಸಭೆಯಲ್ಲಿ ಜನಜಾಗೃತಿ ಸಮಿತಿ ಅಧ್ಯಕ್ಷ ಅರದನಹಳ್ಳಿ ಸೋಮಶೇಖರ್, ಉಪಾಧ್ಯಕ್ಷ ಅಶ್ವಥ್ ಕುಮಾರೇಗೌಡ, ಮದ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಜನಜಾಗೃತಿ ಸಮಿತಿ ಸದಸ್ಯರಾದ ಹಳೇಬೀಡು ಗ್ರಾಪಂ ಅಧ್ಯಕ್ಷ ಧನಂಜಯ್, ಬನ್ನಂಗಾಡಿ ಗ್ರಾಪಂ ಅಧ್ಯಕ್ಷ ಪ್ರಭಾಕರ್, ಜಿಪಂ ಮಾಜಿ ಸದಸ್ಯೆ ಶಾಂತಲ ರಾಮಕೃಷ್ಣೇಗೌಡ, ಸಿ.ಡಿ.ಮಹದೇವು, ಕೋ.ಪು.ಗುಣಶೇಖರ್ ಸೇರಿ ವಿವಿಧ ತಾಲೂಕಿನ ಜನಜಾಗೃತಿ ಸಮಿತಿ ಸದಸ್ಯರು, ಯೋಜನಾಧಿಕಾರಿ ಯಶವಂತ್ ಸೇರಿ ವಿವಿಧ ತಾಲೂಕಿನ ಯೋಜನಾಧಿಕಾರಿಗಳು ಭಾಗವಹಿಸಿದ್ದರು.