ಕನ್ನಡಪ್ರಭ ವಾರ್ತೆ ಪುತ್ತೂರು
ಅವರು ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ಮಲೇರಿಯಾ ಹಾಗೂ ಡೆಂಘೀ ರೋಗಗಳ ನಿಯಂತ್ರಣ ಕುರಿತು ಬುಧವಾರ ಪುತ್ತೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾದ ಮುಂಜಾಗ್ರತಾ ಸಭೆ ಹಾಗೂ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ಮಾತನಾಡಿದರು.
ಈ ಬಾರಿ ಡೆಂಘೀ ಜ್ವರದ ಬಾಧೆ ಗಂಭೀರವಾಗಿದೆ. ರೋಗ ತಡೆಯುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಪರಿಸರ ಸ್ವಚ್ಛತೆಯಿಂದ ಡೆಂಘೀ ರೋಗವನ್ನು ಶೇ.೯೦ರಷ್ಟು ನಿಯಂತ್ರಿಸಲು ಸಾಧ್ಯವಿದೆ ಎಂದರು. ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ನಗರ ಸ್ಥಳೀಯಾಡಳಿತದ ಅಧಿಕಾರಿಗಳು ಈ ಜವಾಬ್ದಾರಿ ವಹಿಸಿಕೊಂಡು ಕಾರ್ಯೋನ್ಮುಖರಾಗಬೇಕು. ಪ್ರತಿದಿನ ತಮ್ಮ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆಗೆ ಸಂಬಂಧಿಸಿ ಸಂಬಂಧಿಸಿದ ಕನಿಷ್ಠ ೫ ಫೊಟೋಗಳನ್ನು ತೆಗೆದು ಜಿಪಿಎಸ್ ಮಾಡಬೇಕು. ಈ ತಿಂಗಳ ಕೊನೆಯವರೆಗೆ ಈ ಕಾರ್ಯ ಕಡ್ಡಾಯವಾಗಿ ನಡೆಸಬೇಕು. ಜನರಿಂದ ನಿಯಮಗಳು ಉಲ್ಲಂಘನೆಯಾಗಿರುವುದನ್ನು ಕಂಡರೆ ದಂಡ ಹಾಕುವ ಅಧಿಕಾರ ಬಳಸಿಕೊಳ್ಳಬೇಕು. ಜನರಲ್ಲಿ ಅರಿವು ಮೂಡಿಸುವ, ಅಂಗನವಾಡಿ, ಶಾಲೆಗಳು, ಬಸ್ ನಿಲ್ದಾಣ, ಚರಂಡಿ ಬ್ಲಾಕ್ ವಿಚಾರಗಳಲ್ಲಿ ನಿಗಾ ವಹಿಸಬೇಕು ಎಂದು ಸೂಚಿಸಿದರು.ಪ್ರಾತ್ಯಕ್ಷಿಕೆಯ ಮೂಲಕ ಡಂಘೀ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮಲೇರಿಯಾ ಹಾಗೂ ಡೆಂಘೀ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್, ಡೆಂಘೀ ಒಂದು ಬಾರಿ ಬಂದರೆ ಜೀವನ ಪರ್ಯಂತ ನೆನಪಿನಲ್ಲಿಟ್ಟುಕೊಳ್ಳುವಂತಹ ಬಾಧೆ ನೀಡುತ್ತದೆ. ಪ್ರತಿಯೊಂದು ವಾರ್ಡ್ ಅಥವಾ ಗ್ರಾಮಗಳಲ್ಲಿ ೫ಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅದನ್ನು ಡೆಂಘೀ ಪೀಡಿತ ಗ್ರಾಮವಾಗಿ ಘೋಷಿಸಬೇಕೆಂಬ ನಿಯಮವಿದೆ ಎಂದರು