ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಐಟಿ ಟಾಸ್ಕ್ ಫೋರ್ಸ್ ವತಿಯಿಂದ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಂಗಳೂರನ್ನು ಐಟಿ ಹಬ್ ಮಾಡಲು ಬೇಕಾದ ಎಲ್ಲ ಮೂಲಸೌಲಭ್ಯ ಕಲ್ಪಿಸಿಕೊಡಲು ಬದ್ಧನಾಗಿದ್ದು, ಈ ನಿಟ್ಟಿನಲ್ಲಿ ಸಚಿವರ ಜತೆ ಚರ್ಚೆ ಸಹಿತ ಹಲವು ಉಪಕ್ರಮಗಳನ್ನು ಆರಂಭಿಸಲಾಗಿದೆ. ಮುಂದೆ ಐಟಿಹಬ್ ಸ್ಥಾಪನೆಗೆ ಬೇಕಾದ ಸಾಧ್ಯತಾ ಯೋಜನೆಗಳನ್ನು ರೂಪಿಸುವ ಜತೆಗೆ ಉದ್ಯೋಗವಕಾಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮಂಗಳೂರಿನಲ್ಲಿ ಈಗಾಗಲೆ ಇನ್ಫೋಸಿಸ್, ಟಿಸಿಎಸ್ ಕಂಪೆನಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಇನ್ನಷ್ಟು ಐಟಿ ಕಂಪೆನಿಗಳು ಬಂದರೆ ಸ್ಥಳೀಯ ಉದ್ಯೋಗವಕಾಶ ಹೆಚ್ಚಳಕ್ಕೂ ಪೂರಕ ಅವಕಾಶ ಸಿಗಲಿದೆ. ಐಟಿ ಕಂಪೆನಿಗಳ ಸ್ಥಾಪನೆಗೆ ಪೂರಕ ಎಲ್ಲ ವಾತಾವರಣ ಎಲ್ಲವೂ ಮಂಗಳೂರಿನಲ್ಲಿದೆ. ಉದ್ಯಮಗಳು ಬಂದಂತೆ ಹೊಟೇಲ್ಗಳು, ಇನ್ನಿತರ ವ್ಯಾಪಾರ ಚಟುವಟಿಕೆಗಳೂ ಹೆಚ್ಚಲಿವೆ ಎಂದು ಕ್ಯಾ.ಚೌಟ ಹೇಳಿದರು.
ಪ್ರವೀಣ್ ಕಲ್ಬಾವಿ ಸಂವಾದ ನಡೆಸಿಕೊಟ್ಟರು. ಮೊಹಮ್ಮದ್ ಹನೀಫ್ ಸ್ವಾಗತಿಸಿದರು. ಅಶಿತ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶೀರ್ ಶೆಟ್ಟಿ ನಿರೂಪಿಸಿದರು. ಸುಬೋಧ್ ವಂದಿಸಿದರು.