ಕನ್ನಡಪ್ರಭ ವಾರ್ತೆ ಬಳ್ಳಾರಿ
ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಕ್ರಿಕೆಟ್ ಪ್ರೇಮಿ ಸಿದ್ದೇಶ್ ಮತ್ತು ಗೆಳೆಯರು ಬ್ಯಾಟ್, ಬಾಲ್ಗಳಿಗೆ ಪೂಜೆ ಸಲ್ಲಿಸಿದರಲ್ಲದೆ, ದೇವಸ್ಥಾನ ಆವರಣದಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಭಾರತ ಪರ ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ಮಾತನಾಡಿದ ಸಿದ್ದೇಶ್, ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆದ್ದುಬರಲಿ ಎಂದು ಹಾರೈಸಿ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟ್ಯಂತರ ಜನರು ಭಾರತ ಗೆದ್ದು ಬರಲಿ ಎಂದು ಹಾರೈಸುತ್ತಿದ್ದು, ಬಳ್ಳಾರಿಯಲ್ಲಿ ಸಹ ಕ್ರಿಕೆಟ್ ಪ್ರೇಮಿಗಳು ಭಾರತ ಕ್ರಿಕೆಟ್ ತಂಡದ ಪರ ಪೂಜೆ ಸಲ್ಲಿಸಿದ್ದಾರೆ ಎಂದರು.ನಗರದ ಆರಾಧ್ಯ ದೈವ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಕಪ್ಪಗಲ್ ರಸ್ತೆಯ ಮದ್ದಾನೇಶ್ವರ ದೇವಸ್ಥಾನ, ಪಾರ್ವತಿನಗರದ ಅನಾದಿಲಿಂಗೇಶ್ವರ ದೇವಸ್ಥಾನ, ದೊಡ್ಡ ಮಾರುಕಟ್ಟೆ ಬಳಿಯ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ನಗರದ ವಿವಿಧೆಡೆ ಕ್ರಿಕೆಟ್ ಪ್ರೇಮಿಗಳು ಪೂಜೆ ಸಲ್ಲಿಸಿ, ಭಾರತ ತಂಡಕ್ಕೆ ಹಾರೈಸಿದರು.
ಬಿಡಿಎಎ ಸಭಾಂಗಣದಲ್ಲಿ ನೇರ ಪ್ರಸಾರ:
ಭಾರತ ತಂಡದ ಸ್ಕೋರ್ ಕಡಿಮೆಯಾಗುತ್ತಿದ್ದಂತೆಯೇ ಮೈದಾನದಿಂದ ಹೊರಬಂದ ಯುವಕರು ಬೇಸರದಿಂದ ಮನೆಯ ಕಡೆ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡುಬಂತು.
ವಿಶ್ವಕಪ್ ಕ್ರಿಕೆಟ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳು ಬಿಕೋ ಎಂದವು. ಸದಾ ಗ್ರಾಹಕರಿಂದ ತುಂಬಿಕೊಂಡಿರುತ್ತಿದ್ದ ಇಲ್ಲಿನ ಬೆಂಗಳೂರು ರಸ್ತೆ, ಗ್ರಹಾಂ ರಸ್ತೆ, ಬ್ರಾಹ್ಮಣ ಬೀದಿಗಳು ಮಧ್ಯಾಹ್ನ ಬಳಿಕ ಜನರಿಲ್ಲದೆ ಭಣಗುಟ್ಟುತ್ತಿದ್ದವು. ಮಧ್ಯಾಹ್ನದ ಬಳಿಕ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿಕೊಂಡಿದ್ದವು.ಬಾರ್ಗಳಲ್ಲಿ ಭರ್ತಿ ಜನ:
ಬಳ್ಳಾರಿ ಜಿಲ್ಲೆಯ ತಾಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶದಲ್ಲೂ ವಿಶ್ವಕಪ್ ಕ್ರಿಕೆಟ್ ವೀಕ್ಷಣೆಗೆ ಜನರು ಹೆಚ್ಚು ಉತ್ಸುಕರಾಗಿದ್ದರು. ರೈತರು, ಕೃಷಿ ಕಾರ್ಮಿಕರು ಸಹ ಕ್ರಿಕೆಟ್ ನೋಡಲು ಟಿವಿ ಮುಂದೆ ಕುಳಿತು, ಭಾರತ ಗೆದ್ದು ಬರಲಿ ಎಂದು ಶುಭ ಹಾರೈಸುತ್ತಿರುವ ದೃಶ್ಯಗಳು ಕಂಡು ಬಂದವು. ಜಿಲ್ಲೆಯ ಜನರು ಬೆಳಗ್ಗೆಯಿಂದಲೇ ಕ್ರಿಕೆಟ್ ಗುಂಗಿನಲ್ಲಿದ್ದರು.