ಪರಿಸರ ಜಾಗೃತಿಗಾಗಿ ಅಖಿಲ ಭಾರತ ಸೈಕಲ್ ಜಾಥಾ

KannadaprabhaNewsNetwork |  
Published : Dec 24, 2023, 01:45 AM ISTUpdated : Dec 24, 2023, 01:46 AM IST
ಪೊಟೋ೨೩ಸಿಪಿಟಿ೩: ಪರಿಸರ,ಅರೋಗ್ಯ ಜಾಗೃತಿಗೆ ಸೈಕಲ್ ಜಾಥಾ ನಡೆಸಿರುವ ಯುವಕ ಅನುಮಪ್ ದಾಸ್‌ನನ್ನು ಕಕಜವೇ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್‌ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.

ಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್‌ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.

ಅಸ್ಸಾಂನ 17ರ ಯುವಕ ಅನುಮಪ್ ದಾಸ್ 28 ರಾಜ್ಯಗಳಲ್ಲಿ ಸೈಕಲ್ ಜಾಥಾ ನಡೆಸಲು ಸಂಕಲ್ಪ ಮಾಡಿದ್ದು, ಈಗಾಗಲೇ ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಸೈಕಲ್ ಜಾಥಾ ನಡೆಸಿದ್ದಾನೆ. ಪ್ರತಿನಿತ್ಯ ಸೈಕಲ್‌ನಲ್ಲಿ 15 ಕಿ.ಮಿ. ಸಂಚರಿಸುತ್ತಿರುವ ಯುವಕ ಜನ ಸಹಾಯ ಮಾಡಿದ ಹಣದಿಂದ ಊಟ, ತಿಂಡಿ, ಖರ್ಚುವೆಚ್ಚಗಳನ್ನು ನಿಭಾಯಿಸುತ್ತಿದ್ದಾನೆ. ರಾತ್ರಿ ವೇಳೆ ಪೆಟ್ರೋಲ್ ಬಂಕ್, ದೇವಸ್ಥಾನದ ಆವರಣದಲ್ಲಿ ಮಲಗಿ ತನ್ನ ಸೈಕಲ್ ಜಾಥಾ ಮುಂದುವರಿಸಿದ್ದು, ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿ ಮೂಡಿಸುತ್ತಿದ್ದಾನೆ.

ಕಕಜವೇ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಪ್ರಕೃತಿ ಉಳಿಸುವ ಜತೆಗೆ ಜನರ ಆರೋಗ್ಯ ಕುರಿತು ಕಾಳಜಿ ವಹಿಸಿ ಸಿರುವ ಯುವಕನ ಸಾಹಸ ಮೆಚ್ಚುವಂತದ್ದು. ತನ್ನ ಬದುಕಿಗಿಂತ ಜನಹಿತವೇ ಮುಖ್ಯ ಎಂದು ಭಾವಿಸಿ, ಭೂತಾಯಿ ಒಡಲು ರಕ್ಷಿಸುವ ನಿಟ್ಟಿನಲ್ಲಿ ಅನುಪಮ್ ದಾಸ್ ಕೈಗೊಂಡಿರುವ ಜಾಥಾ ಯಶಸ್ಸಾಗಲಿ ಎಂದು ಹಾರೈಸಿದರು.

ಈ ವೇಳೆ ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವೆಂಕಟಸುಬ್ಬಯ್ಯ ಚೆಟ್ಟಿ, ಕಕಜವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಪೊಟೋ೨೩ಸಿಪಿಟಿ೩:

ಪರಿಸರ,ಅರೋಗ್ಯ ಜಾಗೃತಿಗೆ ಸೈಕಲ್ ಜಾಥಾ ನಡೆಸಿರುವ ಯುವಕ ಅನುಮಪ್ ದಾಸ್‌ನನ್ನು ಕಕಜವೇ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರಾ ಜಲಾಶಯಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಭೇಟಿ
ರಕ್ತಕ್ಕೆ ಪರ್ಯಾಯವಾದ ವಸ್ತು ಬೇರೊಂದಿಲ್ಲ: ತಾಪಂ ಇಒ