ಅಖಿಲ ಭಾರತ ಅಂತರ್‌ ವಿವಿ ಅಥ್ಲೆಟಿಕ್ಸ್‌: ಮಂಗಳೂರು ವಿ.ವಿ. ಚಾಂಪಿಯನ್‌

KannadaprabhaNewsNetwork |  
Published : Jan 09, 2024, 02:00 AM IST
೮೩ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ಹಾಗೂ ಮಹಿಳಾ ಅಥ್ಲೇಟಿಕ್ಸ್ ಕ್ರೀಡಾಕೂಟ ಪದಕ ಮುಡಿಗೇರಿಸಿಕೊಂಡ ಆಳ್ವಾಸ್: ಮಂಗಳೂರು ವಿ.ವಿ. ಚಾಂಪಿಯನ್ಸ್ | Kannada Prabha

ಸಾರಾಂಶ

ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು ೪ ಚಿನ್ನ, ೩ ಬೆಳ್ಳಿ, ೭ ಕಂಚಿನ ಪದಕ ಪಡೆದುಕೊಂಡಿತು. ಪದಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಪುರುಷ ಹಾಗೂ ಮಹಿಳೆಯರ ಮಂಗಳೂರು ವಿವಿ ತಂಡದ ಒಟ್ಟು ೭೨ ಜನರ ಆಟಗಾರರಲ್ಲಿ ೫೯ ಕ್ರೀಡಾಪಟುಗಳು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

೮೩ನೇ ಅಖಿಲ ಭಾರತ ಅಂತರ್‌ ವಿವಿ ಪುರುಷ ಹಾಗೂ ಮಹಿಳೆಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿ ಸಮಗ್ರ ಚಾಂಪಿಯನ್‌ಶಿಪ್‌ ಪಟ್ಟ ಪಡೆದುಕೊಂಡಿತು.

ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಮಂಗಳೂರು ವಿವಿ ೪೮ (ಪುರುಷ) ಹಾಗೂ ೫೬ (ಮಹಿಳೆಯರ) ಅಂಕಗಳೊಂದಿಗೆ ಒಟ್ಟು ೧೦೪ ಅಂಕ ಪಡೆದರೆ, ಕ್ಯಾಲಿಕಟ್ ವಿವಿ ಪುರುಷರಲ್ಲಿ ೫೩ ಅಂಕ ಹಾಗೂ ಮಹಿಳೆಯರಲ್ಲಿ ೪೧ ಅಂಕ ಪಡೆದು ಒಟ್ಟು ೯೪ ಅಂಕ ಗಳಿಸಿ ರನ್ನರ್‌ಅಪ್‌ ಸ್ಥಾನ ಪಡೆಯಿತು.

ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು ೪ ಚಿನ್ನ, ೩ ಬೆಳ್ಳಿ, ೭ ಕಂಚಿನ ಪದಕ ಪಡೆದುಕೊಂಡಿತು. ಪದಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಪುರುಷ ಹಾಗೂ ಮಹಿಳೆಯರ ಮಂಗಳೂರು ವಿವಿ ತಂಡದ ಒಟ್ಟು ೭೨ ಜನರ ಆಟಗಾರರಲ್ಲಿ ೫೯ ಕ್ರೀಡಾಪಟುಗಳು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದರು.

ಚೆನ್ನೈನ ತಮಿಳನಾಡು ಫಿಸಿಕಲ್ ಎಜುಕೇಷನ್ ಆ್ಯಂಡ್ ಸ್ಪೋರ್ಟ್ಸ್ ವಿವಿಯಲ್ಲಿ ಶನಿವಾರ ಮುಕ್ತಾಯಗೊಂಡ ೮೩ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಪುರುಷರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ೪೮ ಅಂಕಗಳನ್ನು ಪಡೆದ ಮಂಗಳೂರು ವಿಶ್ವವಿದ್ಯಾಲಯ ರನ್ನರ್‌ಅಪ್‌ ಸ್ಥಾನ ಪಡೆಯಿತು.

ಎರಡು ಚಿನ್ನ, ಎರಡು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳೊಂದಿಗೆ ಒಟ್ಟು ಏಳು ಪದಕಗಳನ್ನು ಆಳ್ವಾಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಪಡೆದಿದ್ದಾರೆ.

ಇದಕ್ಕೂ ಮುನ್ನ ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ಮುಕ್ತಾಯಗೊಂಡ ೮೩ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಮಹಿಳಾ ಕ್ರೀಡಾಕೂಟದಲ್ಲಿ ೫೬ ಅಂಕಗಳನ್ನು ಪಡೆದ ಮಂಗಳೂರು ವಿಶ್ವವಿದ್ಯಾಲಯವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’