ಕನ್ನಡಪ್ರಭ ವಾರ್ತೆ ಮಂಡ್ಯ
ಬ್ಯಾಂಕ್ನ ಅಧ್ಯಕ್ಷ ಸಿ.ಸುಂದರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.85 ಹಾಗೂ ಅದಕ್ಕಿಂತ ಅಧಿಕ ಅಂಕಗಳಿಸಿ ಉತ್ತೀರ್ಣರಾದ, ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಅಧ್ಯಕ್ಷ ಸಿ.ಸುಂದರ, ಬ್ಯಾಂಕ್ನ ವ್ಯವಹಾರವು ಪೂರ್ತಿ ಗಣಕೀಕೃತವಾಗಿದೆ. 4 ಸಾವಿರಕ್ಕೂ ಹೆಚ್ಚು ಮಂದಿ ಷೇರುದಾರರಿದ್ದು, ಸಾಲ ಪಡೆದಿರುವ ಷೇರುದಾರರ ಮನೆ ಬಾಗಿಲಿಗೆ ಬ್ಯಾಂಕಿನ ಸಿಬ್ಬಂದಿ ತೆರಳಿ ಸಾಲ ವಸೂಲಿ ಮಾಡುವ ಜೊತೆಗೆ ಬ್ಯಾಂಕ್ನಲ್ಲಿ ವಹಿವಾಟು ಮಾಡಲು ಗ್ರಾಹಕರನ್ನು ಮನವೊಲಿಸುತ್ತಿದ್ದಾರೆ. 2023-24ನೇ ಸಾಲಿಗೆ ಬ್ಯಾಂಕ್ 2 ಲಕ್ಷ, 8 ಸಾವಿರದ 569 ರು. ಲಾಭಾಂಶ ಗಳಿಸಿದೆ ಎಂದರು.ಸಭೆಯಲ್ಲಿ ಉಪಾಧ್ಯಕ್ಷೆ ಸತ್ಯ ಸಾವಿತ್ರಿ, ನಿರ್ದೇಶಕರಾದ ಎಚ್.ಅಶೋಕ, ತಿರುಮಲಚಾರಿ, ಎಚ್.ಎಸ್.ಚನ್ನಪ್ಪ, ಬಿ.ಡಿ. ಪುರುಷೋತ್ತಮ, ಸೋಮಶೇಖರ್ ಕೆರಗೋಡು, ವೃತ್ತಿಪರ ನಿರ್ದೇಶಕ ರಾಮಲಿಂಗೇಗೌಡ, ವ್ಯವಸ್ಥಾಪಕ ಜೆ.ಅಶೋಕ ಸೇರಿದಂತೆ ಮತ್ತಿತರರು ಹಾಜರಿದ್ದರು.ಶ್ರೀ ಅಘೋರ ಭದ್ರಕಾಳಿ ಶಕ್ತಿಪೀಠದಲ್ಲಿ ಪ್ರತ್ಯಂಗಿರಾ ಮಹಾಯಾಗ
ಪ್ರಸ್ತುತ ಮಾಸದಿಂದ ಶ್ರೀ ಪೀಠದಲ್ಲಿ ಹಲವು ಬಗೆಯ ವಿಶೇಷ ಪೂಜೆಗಳು ನೆರವೇರುತ್ತಿದ್ದು, ತಮ್ಮ ಸಮಸ್ಯೆಗಳಿಗೆ ಅನುಗುಣವಾಗಿ ದೇವಿಗೆ ಸೇವೆಯನ್ನು ಸಲ್ಲಿಸುವ ಮುಖಾಂತರ ತಮ್ಮೆಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.