ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ

KannadaprabhaNewsNetwork |  
Published : May 20, 2025, 01:15 AM IST
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ  | Kannada Prabha

ಸಾರಾಂಶ

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಭಯೋತ್ಪಾನೆ ವಿರುದ್ಧ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಶ್ಲಾಘಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ