ಫೆ.3, 4ಕ್ಕೆ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಿದ್ಧತೆ: ಎಸ್ಸೆಸ್ ಮಲ್ಲಿಕಾರ್ಜುನ

KannadaprabhaNewsNetwork |  
Published : Jan 31, 2024, 02:16 AM IST
30ಕೆಡಿವಿಜಿ3-ದಾವಣಗೆರೆಯ ತಮ್ಮ ನಿವಾಸದಲ್ಲಿ ಪತ್ರಕರ್ತರ ಜೊತೆ ಸುದ್ದಿಗೋಷ್ಟಿ ನಂತರ ಸಚಿವ ಎಸ್.ಎಸ್.ಮಲ್ಲಿಕಾರ್ಜುನ. | Kannada Prabha

ಸಾರಾಂಶ

ಸಂಘದ ರಾಜ್ಯ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ತಾಲೂಕು ಕೇಂದ್ರವಾಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ಆರ್.ಎಚ್.ಹನುಮಂತಪ್ಪ ಛತ್ರದಲ್ಲಿ ಸಮ್ಮೇಳನವಾಗಿತ್ತು. ನೂತನ ಜಿಲ್ಲೆಯಾದ 25 ವರ್ಷ ನಂತರ ಇದೇ ಮೊದಲ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ, ಅಭಿಮಾನದ ಸಂಗತಿ.

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಫೆ.3 ಮತ್ತು 4ರಂದು ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪಲ್ಲಿ ನಡೆಯುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಅಂತಿಮ ಸಿದ್ಧತೆ ನಡೆದಿದ್ದು, ಅರ್ಥಪೂರ್ಣ ಹಾಗೂ ಯಶಸ್ವಿ ಸಮ್ಮೇಳನ ಇದಾಗಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ ತಿಳಿಸಿದರು.

ನಗರದ ತಮ್ಮ ನಿವಾಸ ಶಿವಪಾರ್ವತಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 4,500ಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಸುಮಾರು 31 ವರ್ಷಗಳ ನಂತರ ದಾವಣಗೆರೆಯಲ್ಲಿ ನಡೆಯುವ ಪತ್ರಕರ್ತರ ಹಬ್ಬ-ಜಾತ್ರೆಗಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ ಎಂದರು.

ಸಂಘದ ರಾಜ್ಯ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ತಾಲೂಕು ಕೇಂದ್ರವಾಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ಆರ್.ಎಚ್.ಹನುಮಂತಪ್ಪ ಛತ್ರದಲ್ಲಿ ಸಮ್ಮೇಳನವಾಗಿತ್ತು. ನೂತನ ಜಿಲ್ಲೆಯಾದ 25 ವರ್ಷ ನಂತರ ಇದೇ ಮೊದಲ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ, ಅಭಿಮಾನದ ಸಂಗತಿ ಎಂದು ಹೇಳಿದರು.

ಪತ್ರಕರ್ತರ ಬೃಹತ್ ಮೆರವಣಿಗೆ:

ಫೆ.3ರ ಬೆಳಿಗ್ಗೆ 9ಕ್ಕೆ ರೈಲ್ವೇ ಕೆಳ ಸೇತುವೆ ಬಳಿಯ ಹರ್ಡೇಕರ್ ಮಂಜಪ್ಪ ಪುತ್ಥಳಿ, ಪಾಲಿಕೆ ಆವರಣದ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ ರಾಂರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಜಯದೇವ ವೃತ್ತದಿಂದ ಜಾನಪದ ಕಲಾ ತಂಡಗಳು, ಸಂಘ-ಸಂಸ್ಥೆಗಳು, ಸಂಘಟನೆಗಳ ಸಹಯೋಗದಲ್ಲಿ ಪತ್ರಕರ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಸಾರೋಟಿನಲ್ಲಿ ಇಡಲಾದ ವೃಕ್ಷದ ಆಕೃತಿಯಲ್ಲಿ ರೆಂಬೆ ಕೊಂಬೆಯಲ್ಲಿ ಎಲ್ಲಾ ಪತ್ರಿಕೆಗಳ ಶಿರೋನಾಮೆ ಬಿಂಬಿಸಲಾಗುವುದು. ಪತ್ರಕರ್ತರು, ಸಾಹಿತಿಗಳು, ಅಧಿಕಾರಿಗಳು, ಕನ್ನಡ ಪರ ಹೋರಾಟಗಾರರು, ಜನ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟನೆ:

ನಂತರ ಬೆಳಿಗ್ಗೆ 10.30ಕ್ಕೆ ಸಮಾರಂಭ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸುವರು. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲೆಯ ಶಾಸಕರು, ಜನ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.

ಮಧ್ಯಾಹ್ನ 2ಕ್ಕೆ ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮಗಳ ಭವಿಷ್ಯ’, ಸಂಜೆ 4ಕ್ಕೆ `ಸ್ಥಳೀಯ ಪತ್ರಿಕೆಗಳು:ಹಿಂದೆ-ಇಂದು-ಮುಂದು’ವಿಷಯ ಕುರಿತಂತೆ ಗೋಷ್ಠಿ ಇದೆ. ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ, ಹಿರಿಯ ಪತ್ರಕರ್ತ ಈಶ್ವರ ದೈದೋಟ ಸೇರಿ ಹಿರಿಯ ಪತ್ರಕರ್ತರು ಭಾಗವಹಿಸುವರು. ಅದೇ ದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಹೇಳಿದರು.

ಸಮಾರೋಪದಲ್ಲಿ ಡಿಸಿಎಂ ಡಿಕೆಶಿ ಭಾಗಿ:

ಫೆ.4ರ ಬೆಳಿಗ್ಗೆ 9.45ಕ್ಕೆ ಪ್ರತಿನಿಧಿಗಳ ಸಮಾವೇಶ ಜರುಗಲಿದೆ. ಬೆಳಿಗ್ಗೆ 10.30ಕ್ಕೆ `ಮಾಧ್ಯಮ ಮತ್ತು ಸರ್ಕಾರ’, ಬೆಳಿಗ್ಗೆ 11.30ಕ್ಕೆ `ಸಾಮಾಜಿಕ ಮಾಧ್ಯಮ - ವೃತ್ತಿ ವಿಶ್ವಾಸಾರ್ಹತೆ’ ವಿಷಯಗಳ ಕುರಿತ ಗೋಷ್ಠಿಗಳ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ನಾಡಿನ ಹಿರಿಯ ಪತ್ರಕರ್ತ ಎಸ್.ಕೆ.ಶೇಷಚಂದ್ರಿಕಾ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ ಸಮಾರೋಪದ ನುಡಿಗಳನ್ನಾಡುವರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ ಖಂಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲೆಯ ಶಾಸಕರು ವಿಶೇಷ ಆಹ್ವಾನಿತರಾಗಿದ್ದಾರೆ ಎಂದು ವಿವರಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಏಕಬೋಟೆ, ಪ್ರಧಾನ ಕಾರ್ಯದರ್ಶಿ ಎ. ಫಕೃದ್ದೀನ್, ಖಜಾಂಚಿ ಎನ್.ವಿ. ಬದರೀನಾಥ್, ಕಾರ್ಯದರ್ಶಿ ಜೆ.ಎಸ್. ವೀರೇಶ, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಪ್ಪ ಪೇಪರ್, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ. ಒಡೆಯರ್, ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಎಚ್.ಬಿ.ಮಂಜುನಾಥ, ಬಾ.ಮ.ಬಸವರಾಜಯ್ಯ, ಮಂಜುನಾಥ ಗೌರಕ್ಕಳವರ, ಸದಾನಂದ ಹೆಗಡೆ, ಬಸವರಾಜ ದೊಡ್ಮನಿ, ರಮೇಶ ಜಹಗೀರದಾರ್‌, ಬಿ.ಎನ್. ಮಲ್ಲೇಶ, ಮಂಜುನಾಥ ಯಳನಾಡು ಇತರರಿದ್ದರು.

.................

ಹಿರಿಯರಿಗೆ ಸನ್ಮಾನ, ಸಂಘದ ಪ್ರಶಸ್ತಿ ಪ್ರದಾನ

ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ, ಗೌರವಿಸಲಾಗುವುದು. ರಾಜ್ಯ ಪತ್ರಕರ್ತರ ಸಮ್ಮೇಳನದ ಸಂದರ್ಭದಲ್ಲಿ ಪ್ರತಿ ವರ್ಷ ನಾಡಿನ ಹಿರಿಯ ಪತ್ರಕರ್ತರಿಗೆ ಕೊಡಮಾಡುವ ಕೆಯುಡಬ್ಲ್ಯೂಜೆ ರಾಜ್ಯ ಪ್ರಶಸ್ತಿಯನ್ನು ದಾವಣಗೆರೆ ಜಿಲ್ಲೆಯ 6 ಜನರಿಗೆ ನೀಡಲು ತೀರ್ಮಾನಿಸಲಾಗಿದೆ. ಸಮಾವೇಶಕ್ಕೆ ಬಂದ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಸಣ್ಣಪುಟ್ಟ ಸಮಸ್ಯೆಯೂ ಆಗದಂತೆ ಎಲ್ಲಾ ಸಮಿತಿಗಳು ಕಳೆದೊಂದು ತಿಂಗಳಿಂದಲೂ ಸಿದ್ಧತೆಯಲ್ಲಿ ತೊಡಗಿವೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ವರ್ಷದಲ್ಲಿ ಭಾರತದ ಅಭಿವೃದ್ಧಿ : ಶ್ರೀ ಶ್ರೀ
ಮಳೆ ನಿಂತು 10 ದಿನ ಕಳೆದ್ರೂ ಬಿದ್ದ ಮರಗಳ ಸಂಗ್ರಹಕ್ಕೆ ಜಿಬಿಎ ಪರದಾಟ