10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ: ಸಂತೋಷ್ ಕುಮಾರ್

KannadaprabhaNewsNetwork |  
Published : Feb 17, 2026, 01:30 AM IST
ನರಸಿಂಹರಾಜಪುರ ತಾಲೂಕಿನ ಬೆಳ್ಳೂರು ಪ್ರೌಢ ಶಾಲಾ ಆವರಣದಲ್ಲಿ 10 ನೇ  ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷ ಆರ್.ವೆಂಕಟರಮಣಯ್ಯ, ಕಾರ್ಯಾಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್, ಕ.ಸಾ.ಪ ಅಧ್ಯಕ್ಷ ಪೂರ್ಣೇಶ್ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಬೆಳ್ಳೂರಿನಲ್ಲಿ ಫೆ.21 ಹಾಗೂ 22 ರಂದು ನಡೆಯುವ 10 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ತಿಳಿಸಿದರು.

- ಬೆಳ್ಳೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಬೆಳ್ಳೂರಿನಲ್ಲಿ ಫೆ.21 ಹಾಗೂ 22 ರಂದು ನಡೆಯುವ 10 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ತಿಳಿಸಿದರು.

ಭಾನುವಾರ ಬೆಳ್ಳೂರಿನ ಪ್ರೌಢ ಶಾಲಾ ಆವರಣದಲ್ಲಿ 10 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ಕಸಾಪ ಅಜೀವ ಸದಸ್ಯರಿಗೆ ಅಂಚೆ ಮೂಲಕ ಆಹ್ವಾನ ಕಳಿಸಲಾಗುವುದು. ದೇಣಿಗೆ ನೀಡಿ ದವರ ಮನೆಗಳಿಗೆ ಈಗಾಗಲೇ ಪತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಆಹ್ವಾನ ಪತ್ರಿಕೆ ಹಂಚುವ ಕಾರ್ಯ ನಡೆಸ ಬೇಕಿದೆ. ಕಸಾಪ ಸದಸ್ಯರು, ಸ್ವಾಗತ ಸಮಿತಿ ಹಾಗೂ ಉಪ ಸಮಿತಿ ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಬೆಳ್ಳೂರಿನ ಸಾಹಿತ್ಯ ಸಮ್ಮೇಳನ ಹೆಚ್ಚು ಅರ್ಥಗರ್ಭಿತವಾಗಿ ನಡೆಸಲು ಪ್ರಯತ್ನ ಮಾಡುತ್ತಿದ್ದೇವೆ. ಕನ್ನಡದ ಹಬ್ಬವಾದ ಸಮ್ಮೇಳನದಲ್ಲಿ 9 ಪುಸ್ತಕ ಬಿಡುಗಡೆ ಯಾಗಲಿದೆ. ಸಮ್ಮೇಳನಾ ಧ್ಯಕ್ಷರ ಮೆರವಣಿಗೆಯಲ್ಲಿ 2 ಎತ್ತಿನಗಾಡಿ, ಬ್ರಹ್ಮಾವರದ ಚಂಡೆ, ಮಂಗಳವಾದ್ಯ, ಭಜನೆ, ಕೋಲಾಟ, ಸ್ತಬ್ಧ ಚಿತ್ರ, ಪುಸ್ತಕ ಮಳಿಗೆ ಇದೆ. ನರಸಿಂಹರಾಜಪುರದ ಜೊತೆಗೆ ಕೊಪ್ಪ ಹಾಗೂ ಶೃಂಗೇರಿ ಕನ್ನಡ ಅಭಿಮಾನಿಗಳು ಕೈ ಜೋಡಿಸಲಿದ್ದಾರೆ ಎಂದರು.

ಸಭೆ ಅಧ್ಯಕ್ಷತೆವಹಿಸಿದ್ದ ಸ್ವಾಗತ ಸಮಿತಿ ಅಧ್ಯಕ್ಷ ಆರ್. ವೆಂಕಟರಮಣಯ್ಯ ಮಾತನಾಡಿ, ಬೆಳ್ಳೂರು ಪುಟ್ಟಗ್ರಾಮ ವಾಗಿ ದ್ದರೂ ಇಲ್ಲಿ 3 ರಿಂದ 4 ದೊಡ್ಡ ಕಾರ್ಯಕ್ರಮ ನಡೆದಿದೆ. ಕನ್ನಡದ ಸೇವೆಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ನಮ್ಮ ಕುಟುಂಬ ಹಾಗೂ ಬೆಳ್ಳೂರು ಗ್ರಾಮಸ್ಥರಿಂದ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಕಸಾಪ ನಿಕಟಪೂರ್ವ ಅಧ್ಯಕ್ಷ ಎನ್.ಎಂ.ಕಾಂತರಾಜ್ ಮಾತನಾಡಿ, ಸೀತೂರು, ಬೆಳ್ಳೂರು ಭಾಗದಲ್ಲಿ ಜಾನಪದ ಕಲಾವಿ ದರಿದ್ದಾರೆ. ಜಿಲ್ಲಾ ಮಟ್ಟದ ಸಮ್ಮೇಳನದ ರೀತಿಯಲ್ಲಿ ಸಿದ್ಧತೆ ನಡೆದಿದೆ. ಪ್ರಕೃತಿ ಮಡಿಲಲ್ಲಿರುವ ಬೆಳ್ಳೂರಿನ ಹಿರಿಮೆ ಈ ಸಮ್ಮೇಳನದಿಂದ ಇನ್ನಷ್ಟು ಹೆಚ್ಚಲಿದೆ ಎಂದರು.

ಸಭೆಯಲ್ಲಿ ಧ.ಗ್ರಾ.ಯೋಜನೆ ಕೊಪ್ಪ, ಎನ್.ಆರ್.ಪುರ ಯೋಜನಾಧಿಕಾರಿ ರಾಜೇಶ್, ಸಂಪನ್ಮೂಲ ಸಮಿತಿ ಅಧ್ಯಕ್ಷ ಎನ್.ಪಿ.ರಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಸುಬೋದ್, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿದರು. ಪ್ರಚಾರ ಸಮಿತಿ ಗೌರವಾಧ್ಯಕ್ಷ ಯಡಗೆರೆ ಮಂಜುನಾಥ್ ಸ್ವಾಗತಿಸಿದರು. ಕಸಾಪ ಪ್ರಧಾನ ಕಾರ್ಯದರ್ಶಿ ನಂದಿನಿ ಆಲಂದೂರು ವಂದಿಸಿದರು. ಸಭೆಯಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲಾ ಹಂತದಲ್ಲೇ ಮಕ್ಕಳನ್ನು ದಂಡಿಸದಿದ್ದರೆ ಅಪಾಯ: ನಿಶ್ಚಲಾನಂದನಾಥ ಸ್ವಾಮೀಜಿ
ಜಾತ್ರೆ: ಎಸ್‌ಪಿ ನೇತೃತ್ವದಲ್ಲಿ ಜನಜಾಗೃತಿ ಪಥ ಸಂಚಲನ