ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಸಾವಿರಾರು ಕೆರೆಗಳ ನಿರ್ಮಾಣ
ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಸಾವಿರಾರು ಕೆರೆಗಳನ್ನು ನಿರ್ಮಿಸಿ ಜನರ ಮನಸ್ಸಿನಲ್ಲಿ ಅಜರಾಮರವಾಗಿದ್ದಾರೆ. ಕೆಂಪೇಗೌಡರ ದೂರದೃಷ್ಟಿ, ನಾಯಕತ್ವ ಗುಣ, ಸಾಮಾಜಿಕ ನ್ಯಾಯದ ಪರಿಕಪ್ಲನೆ ಹಾಗೂ ಅವರ ಪ್ರತಿಪಾದಿಸಿದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದರು. ಮಕ್ಕಳಿಗೆ ಶಿಕ್ಷಣ ಕೊಡಿಸಿಶಿಕ್ಷಣವೊಂದೇ ಉತ್ತಮ ಬದುಕನ್ನು ರೂಪಿಸಲು ಇರುವ ಏಕೈಕ ಮಾರ್ಗವಾಗಿದ್ದು ಎಲ್ಲಾ ಸಮುದಾಯದವರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೂಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎನ್.ಎಂ.ರವಿನಾರಾಯಣ ರೆಡ್ಡಿ ಮಾತನಾಡಿ ಶತಮಾನಗಳ ಹಿಂದೆಯೇ ಸಮುದಾಯಗಳ ಕುಲ, ವೈತ್ತಿಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿಕೊಟ್ಟು ಬೆಂಗಳೂರು ನಗರವನ್ನು ಇಡೀ ವಿಶ್ವದ ಜನರು ನೋಡುವಂತೆ ಮಾಡಿದ ಕೀರ್ತಿ ಘನತೆ ಕೆಂಪೇಗೌಡರಿಗೆ ಸಲ್ಲುತ್ತದೆ. ಅಂದೇ ಎಲ್ಲ ಜಾತಿಯ ಜನರಿಗೆ ಆಶ್ರಯ ನೀಡಿರುವುದರ ಫಲವಾಗಿ ಬೆಂಗಳೂರಿನಲ್ಲಿ ಇಂದಿಗೂ ಎಲ್ಲ ವರ್ಗದವರು ಜೀವನ ಸಾಗಿಸುತ್ತಿದ್ದಾರೆ. ಎಂದರು. ಮಾಜಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ, ಮತ್ತಿತರರು ಉಪಸ್ಥಿತರಿದ್ದರು.