ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ದೇವರಾಜ ಅರಸು ಬಡಾವಣೆಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಸಂವಿಧಾನ ಜಾಗೃತಿ ರಥಯಾತ್ರೆಗೆ ಸ್ವಾಗತಿಸಿ ಮಾತನಾಡಿ
ರಾಜ್ಯದಲ್ಲಿ ಸಂವಿಧಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ನಡೆದಿದೆ. ಸಂವಿಧಾನದ ಬಗ್ಗೆ ಜನ ಜಾಗೃತಿ ರಥಯಾತ್ರೆ ಕೈಗೊಂಡಿದ್ದು, ರಾಜ್ಯಾದ್ಯಂತ ಪ್ರತಿ ಗ್ರಾಮಕ್ಕೂ ರಥಯಾತ್ರೆ ಸಾಗುತ್ತಿದೆ. ಈ ಮೂಲಕ ಪ್ರತಿಯೊಬ್ಬ ಪ್ರಜೆಗೂ, ವಿದ್ಯಾರ್ಥಿಗಳಿಂದ ಹಿರಿಯ ನಾಗರಿಕವರೆಗೆ ಎಲ್ಲರಿಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ, ಜಾಗೃತಿ ತರುವ ಕೆಲಸ ಆಗುತ್ತಿದೆ ಎಂದು ಶ್ಲಾಘಿಸಿದರು.ಜಾಗೃತಿ ಮೂಡಿಸುವ ಕೆಲಸ:
ಬ್ರಿಟಿಷರಿಂದಾಗಿ ಶತಮಾನಗಳ ಕಾಲ ದಾಸ್ಯಕ್ಕೆ ಒಳಗಾಗಿದ್ದ ಭಾರತ ಸ್ವಾತಂತ್ರ್ಯ ಪಡೆದ ನಂತರ ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬರಿಗೂ ಎಲ್ಲಾ ಹಕ್ಕುಗಳು ಸಿಗುತ್ತಿವೆ. ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಂವಿಧಾನ ಜಾಗೃತಿ ಅಭಿಯಾನವನ್ನು ಜ.26ರಿಂದ ಮಾ.5ರವರೆಗೆ ರಾಜ್ಯವ್ಯಾಪಿ ಹಮ್ಮಿಕೊಂಡಿದೆ, ಯಾತ್ರೆಯು ಸಫಲವಾಗಬೇಕು. ಯಾರೂ ಸಹ ತಮ್ಮ ಹಕ್ಕುಗಳಿಂದ ವಂಚಿತರಾಗಬಾರದು. ನಾಗರೀಕ ಜೀವನ ನಡೆಸಲು ಸಂವಿಧಾನದಿಂದ ಮಾತ್ರ ಸಾಧ್ಯ ಎಂದು ನ್ಯಾಯಮೂರ್ತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಭಾರತದಂತಹ ದೊಡ್ಡ ರಾಷ್ಟ್ರವೊಂದು ಜಗತ್ತಿಗೆ ಮಾದರಿಯಾಗಿರುವ ಸಂವಿಧಾನ ಇರುವುದರಿಂದರೇ ಇಂದಿಗೂ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿಂತಿದೆ. ನಾವೆಲ್ಲರೂ ನಾಗರಿಕರಾಗಿ ಜೀವನ ನಡೆಸಲೂ ಸಂವಿಧಾನದಿಂದಾಗಿಯೇ ಅವಕಾಶವೂ ಸಿಕ್ಕಿದೆ. ಸಂವಿಧಾನ ಇಲ್ಲವೆಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ. ಸಂವಿಧಾನವನ್ನು ಪ್ರತಿಯೊಬ್ಬರೂ ಓದಿ ತಿಳಿಯುವ ಮೂಲಕ ದೇಶವನ್ನು ಮತ್ತಷ್ಟು ಸದೃಢಗೊಳಿಸಬೇಕು.
ರಾಜೇಶ್ವರಿ ಎನ್.ಹೆಗಡೆ, ಜಿಲ್ಲಾ ನ್ಯಾಯಾಧೀಶರು