ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

KannadaprabhaNewsNetwork |  
Published : Oct 06, 2024, 01:23 AM ISTUpdated : Oct 06, 2024, 01:24 AM IST
ರಾಘವೇಂದ್ರ ಹಿಟ್ನಾಳ | Kannada Prabha

ಸಾರಾಂಶ

ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.

ಬಿಜೆಪಿ-ಜೆಡಿಎಸ್ ನಾಯಕರು ರಾಜಕೀಯಕ್ಕೆ ಎಳೆದು ತರುವ ಕೆಲಸ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡಲಿ, ನಾವು ರಸ್ತೆ ಮಾಡಿ ತೋರಿಸುತ್ತೇವೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಕವಲೂರು ಗ್ರಾಮದಲ್ಲಿ ನಡೆದ ಪ್ರತಿಭಟನೆ ಕುರಿತು ಬಿಜೆಪಿ ಜೆಡಿಎಸ್ ಮುಖಂಡರು ತಮ್ಮ ಮೇಲೆ ಮಾಡುತ್ತಿರುವ ಆರೋಪ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಪ್ರತಿಭಟನೆಯನ್ನು ಕೊಪ್ಪಳದ ಬಿಜೆಪಿ-ಜೆಡಿಎಸ್ ನಾಯಕರು ರಾಜಕೀಯಕ್ಕೆ ಎಳೆದು ತರುವ ಕೆಲಸ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡಲಿ, ನಾವು ರಸ್ತೆ ಮಾಡಿ ತೋರಿಸುತ್ತೇವೆ. ಈಗಾಗಲೇ ಈ ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮೀಸಲಿಡುವ ಕೆಲಸ ಮಾಡಿದ್ದೇವೆ. ಅಳವಂಡಿ ವ್ಯಾಪ್ತಿಯಲ್ಲಿ ಅಂದಾಜು ₹68.48 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದೇವೆ ಎಂದರು.

ತಾಲೂಕಿನ ಕವಲೂರಿನಿಂದ ಮುರ್ಲಾಪುರ ವರೆಗೆ ರಸ್ತೆ ಅಭಿವೃದ್ಧಿಗೆ ₹3.5 ಕೋಟಿ, ಕವಲೂರು ಬನ್ನಿಕೊಪ್ಪ-ಗುಡುಗೇರಿ ರಸ್ತೆಗೆ 2.25 ಕೋಟಿ, ಕವಲೂರು-ಬನ್ನಿಕೊಪ್ಪ ರಸ್ತೆ ಅಭಿವೃದ್ಧಿಗೆ ₹7.5 ಕೋಟಿ, ಕವಲೂರು-ಮುರ್ಲಾಪುರ ರಸ್ತೆ ಅಭಿವೃದ್ಧಿ ₹2.19 ಕೋಟಿ, ಗುಡುಗೇರಿಯಿಂದ ಹಳ್ಳಿಕೇರಿಯ 5.16 ಕಿಮೀ ರಸ್ತೆ ಅಭಿವೃದ್ಧಿಗೆ ₹ 7.26 ಕೋಟಿ, ಗುಡುಗೇರಿಯಿಂದ ಏಕ್ಸಲಾಪುರ ₹3.29 ಕಿಮೀ ರಸ್ತೆ ಅಭಿವೃದ್ಧಿಗೆ ₹4.47 ಕೋಟಿ, ಅಳವಂಡಿಯಿಂದ ಘಟ್ಟರಡ್ಡಿಹಾಳ 2.8 ಕಿಮೀ ರಸ್ತೆ ಅಭಿವೃದ್ಧಿಗೆ ₹3.66 ಕೋಟಿ, ಬೈರಾಪುರದಿಂದ ಬೆಟಗೇರಿಯ 6.71 ಕಿಮೀ ರಸ್ತೆ ಅಭಿವೃದ್ಧಿಗೆ ₹7.64 ಕೋಟಿ, ಹೈದರ್ ನಗರದಿಂದ ಹಟ್ಟಿವರೆಗಿನ ರಸ್ತೆ ಅಭಿವೃದ್ಧಿಗೆ ₹5 ಕೋಟಿ, ಕೇಸಲಾಪುರದಿಂದ ರಾಜ್ಯ ಹೆದ್ದಾರಿ ಎಸ್.ಎಚ್ -129 ರಸ್ತೆ ಅಭಿವೃದ್ಧಿಗೆ 1.77 ಕೋಟಿ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

14 ಜನರ ಮೇಲೆ ಎಫ್ಐಆರ್ ಆಗಿರುವುದರ ಬಗ್ಗೆ ಗಮನಕ್ಕಿಲ್ಲ. ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಈ ಕುರಿತು ಮಾಹಿತಿ ಪಡೆದು, ಪ್ರಕರಣ ಇತ್ಯರ್ಥಪಡಿಸಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ