ಕನ್ನಡಪ್ರಭ ವಾರ್ತೆ ತೇರದಾಳ(ರ-ಬ)
ತಮ್ಮ ವೈದ್ಯಕೀಯ ಸೇವೆಯ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಪ್ರಾಧಾನ್ಯತೆ ನೀಡುವ ಮೂಲಕ ತೇರದಾಳ ಮತ್ತು ಸುತ್ತಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ನೀಡಲು ಪ್ರಾರಂಭಿಸಿರುವ ಡಾ.ಮಹಾವೀರ ದಾನಿಗೊಂಡರ ಕಾರ್ಯ ಶ್ಲಾಘನೀಯವೆಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಚೇರಮನ್ ಡಾ. ಮಹಾವೀರ ದಾನಿಗೊಂಡ, ಕ್ರೀಡಾಪಟುಗಳನ್ನು ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು. ಕ್ರೀಡಾಳುಗಳಿಗೆ ಸರ್ಕಾರಗಳು ನೆರವಿನ ಹಸ್ತ ಚಾಚುವ ಮೂಲಕ ಉದ್ಯೋಗಾವಕಾಶಗಳಲ್ಲಿ ಆದ್ಯತೆಯ ಅವಕಾಶ ಕಲ್ಪಿಸಬೇಕು ಆದರೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಅದು ಸಾಧ್ಯ ಆಗುತ್ತಿಲ್ಲ. ಆದರೂ ದೇಶದ ಕ್ರೀಡಾಪಟುಗಳು ಅಂತರಾಷ್ಟçಮಟ್ಟದ ಬೇರೆ ಬೇರೆ ಕ್ರೀಡೆಗಳಲ್ಲಿ ಪದಕಗಳನ್ನು ತರುವುದು ನಿಲ್ಲಿಸಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ರಾಣಿ ಚೆನ್ನಮ್ಮ ವಿವಿ ದೈಹಿಕ ನಿರ್ದೇಶಕ ಡಾ. ಜಗದೀಶ ಗಸ್ತಿ ಮಾತನಾಡಿದರು. ದಾನಿಗೊಂಡ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಂತೋಷ ಕೃಷ್ಣಾಪುರೆ, ದೈಹಿಕ ನಿರ್ದೇಶಕ ರಾಮು ಹಾಡಕರ ಮತ್ತಿತರಿದ್ದರು. ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಪುರುಷ ಹಾಗೂ ಮಹಿಳೆಯರ ೨೮ ತಂಡಗಳು ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.