ಆಲಮಟ್ಟಿ: ವರ್ಷದ ಮೊದಲ ಒಳಹರಿವು ಆರಂಭ

KannadaprabhaNewsNetwork |  
Published : Jun 08, 2024, 12:35 AM IST
ಷಷ | Kannada Prabha

ಸಾರಾಂಶ

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ಶುಕ್ರವಾರ ದಾಖಲಾಗಿದೆ. 1,768 ಕ್ಯುಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ಶುಕ್ರವಾರ ದಾಖಲಾಗಿದೆ. 1,768 ಕ್ಯುಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಿಗೆ ಸಂತಸ ತಂದಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಮಳೆಯಿಂದ ಈ ಒಳಹರಿವು ಬಂದಿದ್ದು, ಇನ್ನೂ ಮಹಾರಾಷ್ಟ್ರದಿಂದ ಬಿಟ್ಟ ನೀರು ಬಂದಿಲ್ಲ. ಕಳೆದ ವರ್ಷ ಮಳೆಯ ಅಭಾವ, ನೀರಿನ ಬರ ಅನುಭವಿಸದ ರೈತರಿಗೆ ಈ ಬಾರಿ ಅಣೆಕಟ್ಟಿಗೆ ನೀರು ಬಂದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.

ಜಲಾಶಯ ಶೀಘ್ರ ಭರ್ತಿಯತ್ತ ಸಾಗಲಿ ಎಂದು ರೈತರ ಅಪೇಕ್ಷೆಯಾಗಿದೆ.

ನೀರಿನ ಸಂಗ್ರಹದ ಮಾಹಿತಿ:

519.60 ಮೀ ಗರಿಷ್ಠ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಶುಕ್ರವಾರ 507.79 ಮೀ ವರೆಗೆ ನೀರು ಇತ್ತು. 123.081 ಟಿಎಂಸಿ ಗರಿಷ್ಠ ಸಂಗ್ರಹದ ಜಲಾಶಯದಲ್ಲಿ 20.6 ಟಿಎಂಸಿ ನೀರಿದೆ. ಅದರಲ್ಲಿ ಬಳಕೆಯೋಗ್ಯ 3 ಟಿಎಂಸಿ ನೀರಿದೆ.

ಈಗ ಜಲಾಶಯಕ್ಕೆ ಬಂದಿರುವುದು ಅಲ್ಪ ಒಳಹರಿವು. ಪ್ರತಿವರ್ಷ ಬಹಳಷ್ಟು ದಿನಗಳ ಕಾಲ ಜಲಾಶಯಕ್ಕೆ ಒಂದು ಲಕ್ಷ ಕ್ಯುಸೆಕ್ ಕ್ಕಿಂತ ಹೆಚ್ಚು ನೀರು ಬರುತ್ತದೆ. ಪ್ರತಿ ವರ್ಷ ಜುಲೈ ಮೊದಲ ವಾರದಲ್ಲಿಯೇ ಜಲಾಶಯ ಭರ್ತಿಯತ್ತ ಸಾಗುತ್ತದೆ. ಈ ವರ್ಷ ಮಹಾರಾಷ್ಟ್ರದಲ್ಲಿ ಮಳೆಯಾಗಿ ಹೆಚ್ಚು ನೀರು ಬರಲಿ ಎಂದು ರೈತರ ನಿರೀಕ್ಷೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ