ಬಲದಂಡೆ ಕಾಲುವೆಗೆ ಆಲಮಟ್ಟಿ ನೀರು: ಎಚ್.ವೈ. ಮೇಟಿ

KannadaprabhaNewsNetwork |  
Published : Feb 29, 2024, 02:07 AM IST
(ಫೋಟೋ 28ಬಿಕೆಟಿ8, ಶಾಸಕ ಎಚ್.ವೈ. ಮೇಟಿ) | Kannada Prabha

ಸಾರಾಂಶ

ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಲಮಟ್ಟಿ ಬಲದಂಡೆ ಕಾಲುವೆಗೆ ಕಳೆದ ಹಲುವ ದಿನಗಳಿಂದ ನೀರು ಇರಲಿಲ್ಲ. ಇದರಿಂದ ಈ ಕಾಲುವೆ ವ್ಯಾಪ್ತಿಯಲ್ಲಿ ಬರುವ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆ, ಸಿಂಗಲ್ ವಿಲೇಜ್ ಸ್ಕೀಂ ಗಳಡಿ ಬರುವ ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿತ್ತು. ಹೀಗಾಗಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಆಲಮಟ್ಟಿ ಬಲದಂಡೆ ಕಾಲುವೆ ಮೂಲಕ ಸುಮಾರು 8 ದಿನಗಳ ಕಾಲ ನೀರು ಬಿಡಲು ಉಸ್ತುವಾರಿ ಸಚಿವರು, ಸಂಬಂಧಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಾಳೆಯಿಂದಲೇ ಕಾಲುವೆಗೆ ನೀರು ಬರಲಿದೆ. ರೈತರು, ಬೆಳೆಗೆ ಈ ನೀರನ್ನು ಬಳಸಿಕೊಳ್ಳದೆ ಕುಡಿಯುವ ನೀರಿಗಾಗಿ ಬಳಸಬೇಕು. ಅಲ್ಲದೆ, ನೀರನ್ನು ಮಿತವಾಗಿ ಬಳಕೆ ಮಾಡಬೇಕು ಎಂದು ಶಾಸಕ ಮೇಟಿ ಮನವಿ ಮಾಡಿದ್ದಾರೆ.

ಈ ಕಾಲುವೆ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸಲು ಅನುಕೂಲತೆಗಳಿದ್ದರೆ, ಕೆರೆಗೂ ನೀರು ತುಂಬಿಸಬೇಕು. ಬರಲಿರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ತಲೆದೋರದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕಿದೆ. ಹೀಗಾಗಿ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ