ಕನ್ನಡಪ್ರಭ ವಾರ್ತೆ ಕಲಬುರಗಿ
ಜೇವರ್ಗಿ ತಾಲೂಕು ಜೈನಾಪುರ ಗ್ರಾಮದ ನಾಗಣ್ಣ (54) ಕುರ್ಚಿಯಿಂದ ಬಿದ್ದು ಹೊಟ್ಟೆಗೆ ತೀವ್ರಗಾಯ ಮಾಡಿಕೊಂಡದ್ದ. ಈತನನ್ನು ಚಿಕಿತ್ಸೆಗೆ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟ ವ್ಯಕ್ತಿ ಈತನಾಗಿದ್ದ.
ನಾಗಣ್ಣ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದ ವೇಳೆ ಹೊಟ್ಟೆಯ ಭಾಗಕ್ಕೆ ಮಂಚ ಬಡಿದಿತ್ತು. ಜುಲೈ 3 ರಂದು ಚಿಕಿತ್ಸೆಗೆಂದು ತನ್ನ ಮಗನೊಂದಿಗೆ ಕಲಬುರಗಿಯಲ್ಲಿರುವ ಯುನೈಟೆಡ್ ಆಸ್ಪತ್ರೆಗೆ ದಾಖಲಾಗಿದ್ದರು.ತಪಾಸಣೆ ನಡೆಸಿದ್ದ ಆಸ್ಪತ್ರೆಯ ವೈದ್ಯರು, ಹೊಟ್ಟೆಗೆ ಪೆಟ್ಟು ಬಡಿದಿರುವುದರಿಂದ ಹೊಟ್ಟೆಯೊಳಗೆ ರಕ್ತ ಹೆಪ್ಪುಗಟ್ಟಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ಹೇಳಿದ್ದರು.
ಹೋಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ ವ್ಯಕ್ತಿಯ ಚಿಕಿತ್ಸೆಯಲ್ಲಿ ಅಲಕ್ಷತನ ತೋರಲಾಗಿದೆ, ಇದರಿಂದಲೇ ನಾಗಣ್ಣ ಕೋಮಾಕ್ಕೆ ಜಾರುವಂತೆ ಮಾಡಲಾಗಿದೆ. ಚಿಕಿತ್ಸೆನೀಡುವಲ್ಲಿ ನಿರ್ಲಕ್ಷ್ಯವಹಿಸಿದ ವೈದ್ಯರು ಮತ್ತು ಯುನೈಟೆಡ್ ಆಸ್ಪತ್ರೆಯ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಆಸ್ಪತ್ರೆ ಎದುರು ನೂರಾರು ಜನ ಗುಂಪುಗೂಡಿದ್ದಲ್ಲದೆ ಖಾಸಗಿ ಆಸ್ಪತ್ರೆಗಳ ಹಾವಳಿಯ ವಿರುದ್ಧ ಅಸಮಧಾನ ಹೋರಹಾಕಿದರು.